Advertisement
Political mirror

ಸುಳ್ಯದಲ್ಲಿ ಬಿಜೆಪಿಯ ಬೆನ್ನು ಬಿಡದ ಅಡ್ಡ ಮತದಾನ ಪ್ರಕರಣ

Share

ಸುಳ್ಯ: ಡಿಸಿಸಿ ಬ್ಯಾಂಕ್ ಅಡ್ಡಮತದಾನ ಪ್ರಕರಣದ ಬಳಿಕ ನಗರ ಪಂಚಾಯತ್ ಚುನಾವಣೆ ಮುಗಿದರೂ ಅಡ್ಡ ಮತದಾನದ ಇಶ್ಯೂ ಬಿಜೆಪಿಗೆ ಮುಗಿದಿಲ್ಲ. ಇದೀಗ ಮತ್ತೆ ಸುದ್ದಿಯಾಗುತ್ತಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅಡ್ಡಮತದಾನ ನಡೆದು ಬಿಜೆಪಿ ಹಾಗೂ ಸಹಕಾರ ಭಾರತಿ , ಸಂಘಪರಿವಾರಕ್ಕೆ ಮುಜುಗರವಾಗಿತ್ತು. ಜಿಲ್ಲೆಯಲ್ಲಿ  ಬಹುದೊಡ್ಡ ಸಂಘಟನೆ ಹೊಂದಿದ್ದರೂ ಡಿಸಿಸಿ ಬ್ಯಾಂಕ್ ಅಧಿಕಾರ ಹಿಡಿಯಲು ಆಗದೇ ಇರುವ ಬಗ್ಗೆ ಬಹುತೇಕ ಬಿಜೆಪಿ ಕಾರ್ಯಕರ್ತರು ಮಾತನಾಡುತ್ತಾರೆ. ಆದರೆ ಸುಳ್ಯದಲ್ಲಿ ಮಾತ್ರಾ ಈ ಅಡ್ಡಮತದಾನ ಪ್ರಕರಣ ಇಡೀ ಜಿಲ್ಲಾಮಟ್ಟದಲ್ಲಿ ಸುದ್ದಿಯಾಗಿತ್ತು. ಜಿಲ್ಲೆಯ ಇತರ ಕಡೆಗಳಲ್ಲಿ  ಬಿಜೆಪಿ ಅಥವಾ ಸಹಕಾರ ಭಾರತಿ ಬಂಡಾಯ ಅಭ್ಯರ್ಥಿಗಳು ಗೆಲವು ಕಂಡಿದ್ದರೆ ಸುಳ್ಯದಲ್ಲಿ ಮಾತ್ರಾ ಭಿನ್ನವಾಗಿತ್ತು. ಹೀಗಾಗಿ ಸಂಘಟನೆಯ ಸಿದ್ಧಾಂತಯರ ಮೇಲೆಯೇ ಚರ್ಚೆಯಾಗಿತ್ತು. ಇದಕ್ಕಾಗಿ ಸುಳ್ಯದಲ್ಲಿ ಅಡ್ಡಮತದಾನ ಮಾಡಿದವರು ಮೇಲೆ ಶಿಸ್ತು ಕ್ರಮಕೈಗೊಳ್ಳಲು ವಿವಿಧ ಪ್ರಯತ್ನ ನಡೆಸಿತ್ತು. ಅದರಲ್ಲಿ ಕಾನತ್ತೂರು ದೈವಸ್ಥಾನದಲ್ಲಿ ಪ್ರಮಣ ಮಾಡುವುದು  ಮೊದಲ ಪ್ರಯತ್ನವಾಯಿತು, ಅಲ್ಲೂ ಅಡ್ಡ ಮತದಾನ ತಿಳಿತಯದ ಕಾರಣ ಮತದಾನ ಮಾಡಿದ ಎಲ್ಲರೂ ರಾಜೀನಾಮೆ ನೀಡುವಂತೆ ಪಕ್ಷ ಸೂಚನೆ ನೀಡಿತು. ಅದೂ ಇದುವರೆಗೆ ಯಾವುದೇ ಜಾರಿಯಾಗದ ಬಗ್ಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿರುವಂತೆಯೇ ಇದೀಗ ಮತ್ತೊಂದು ಚರ್ಚೆ ಶುರುವಾಗಿದೆ.

ಕಾನತ್ತೂರಿನ ದೈವಸ್ಥಾನದಲ್ಲಿ ಪ್ರಮಾಣದಲ್ಲಿ ಭಾಗಿಯಾದ ಕೆಲವು ಮಂದಿ ಮತ್ತೆ ಕಾನತ್ತೂರಿಗೆ ತೆರಳಿದ್ದು ತಪ್ಪು ಕಾಣಿಕೆ ಹಾಕಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಖಚಿತವಾದ ಮಾಹಿತಿ ಕಾರ್ಯಕರ್ತರಿಗೆ ತಿಳಿಯದೇ ಇರುವ ಕಾರಣ ಇದೀಗ ಚರ್ಚೆ ನಡೆಸುತ್ತಿದ್ದಾರೆ. ಆದರೆ ಯಾವುದೇ ದಾಖಲೆಗಳು ಇಲ್ಲದ ಕಾರಣ ಚರ್ಚೆಗೆ ಅರ್ಥ ಬಂದಿಲ್ಲ. ಅಂತೂ ಅಡ್ಡ ಮತದಾನದ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಮುಂದಿನ ಚುನಾವಣೆಯ ಹೊತ್ತಿಗೆ ಬಿಜೆಪಿ ಹಾಗೂ ಸಂಘಪರಿವಾರವು ನಗರ ಪಂಚಾಯತ್ ಚಯನಾವಣೆಯಲ್ಲಿ  ಕೈಗೊಂಡಂತೆ ಹೊಸಬರಿಗೆ ಆದ್ಯತೆ ನೀಡಬೇಕಾದ ಅನಿವಾರ್ಯತೆ ಬರಬಹುದು ಎಂಬುದು  ಕಾರ್ಯಕರ್ತರ ಅಂಬೋಣ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

8 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

14 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

2 days ago