Advertisement
Political mirror

ಸುಳ್ಯದಲ್ಲಿ ಬಿಜೆಪಿಯ ಬೆನ್ನು ಬಿಡದ ಅಡ್ಡ ಮತದಾನ ಪ್ರಕರಣ

Share

ಸುಳ್ಯ: ಡಿಸಿಸಿ ಬ್ಯಾಂಕ್ ಅಡ್ಡಮತದಾನ ಪ್ರಕರಣದ ಬಳಿಕ ನಗರ ಪಂಚಾಯತ್ ಚುನಾವಣೆ ಮುಗಿದರೂ ಅಡ್ಡ ಮತದಾನದ ಇಶ್ಯೂ ಬಿಜೆಪಿಗೆ ಮುಗಿದಿಲ್ಲ. ಇದೀಗ ಮತ್ತೆ ಸುದ್ದಿಯಾಗುತ್ತಿದೆ.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅಡ್ಡಮತದಾನ ನಡೆದು ಬಿಜೆಪಿ ಹಾಗೂ ಸಹಕಾರ ಭಾರತಿ , ಸಂಘಪರಿವಾರಕ್ಕೆ ಮುಜುಗರವಾಗಿತ್ತು. ಜಿಲ್ಲೆಯಲ್ಲಿ  ಬಹುದೊಡ್ಡ ಸಂಘಟನೆ ಹೊಂದಿದ್ದರೂ ಡಿಸಿಸಿ ಬ್ಯಾಂಕ್ ಅಧಿಕಾರ ಹಿಡಿಯಲು ಆಗದೇ ಇರುವ ಬಗ್ಗೆ ಬಹುತೇಕ ಬಿಜೆಪಿ ಕಾರ್ಯಕರ್ತರು ಮಾತನಾಡುತ್ತಾರೆ. ಆದರೆ ಸುಳ್ಯದಲ್ಲಿ ಮಾತ್ರಾ ಈ ಅಡ್ಡಮತದಾನ ಪ್ರಕರಣ ಇಡೀ ಜಿಲ್ಲಾಮಟ್ಟದಲ್ಲಿ ಸುದ್ದಿಯಾಗಿತ್ತು. ಜಿಲ್ಲೆಯ ಇತರ ಕಡೆಗಳಲ್ಲಿ  ಬಿಜೆಪಿ ಅಥವಾ ಸಹಕಾರ ಭಾರತಿ ಬಂಡಾಯ ಅಭ್ಯರ್ಥಿಗಳು ಗೆಲವು ಕಂಡಿದ್ದರೆ ಸುಳ್ಯದಲ್ಲಿ ಮಾತ್ರಾ ಭಿನ್ನವಾಗಿತ್ತು. ಹೀಗಾಗಿ ಸಂಘಟನೆಯ ಸಿದ್ಧಾಂತಯರ ಮೇಲೆಯೇ ಚರ್ಚೆಯಾಗಿತ್ತು. ಇದಕ್ಕಾಗಿ ಸುಳ್ಯದಲ್ಲಿ ಅಡ್ಡಮತದಾನ ಮಾಡಿದವರು ಮೇಲೆ ಶಿಸ್ತು ಕ್ರಮಕೈಗೊಳ್ಳಲು ವಿವಿಧ ಪ್ರಯತ್ನ ನಡೆಸಿತ್ತು. ಅದರಲ್ಲಿ ಕಾನತ್ತೂರು ದೈವಸ್ಥಾನದಲ್ಲಿ ಪ್ರಮಣ ಮಾಡುವುದು  ಮೊದಲ ಪ್ರಯತ್ನವಾಯಿತು, ಅಲ್ಲೂ ಅಡ್ಡ ಮತದಾನ ತಿಳಿತಯದ ಕಾರಣ ಮತದಾನ ಮಾಡಿದ ಎಲ್ಲರೂ ರಾಜೀನಾಮೆ ನೀಡುವಂತೆ ಪಕ್ಷ ಸೂಚನೆ ನೀಡಿತು. ಅದೂ ಇದುವರೆಗೆ ಯಾವುದೇ ಜಾರಿಯಾಗದ ಬಗ್ಗೆ ಬಿಜೆಪಿ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಿರುವಂತೆಯೇ ಇದೀಗ ಮತ್ತೊಂದು ಚರ್ಚೆ ಶುರುವಾಗಿದೆ.

ಕಾನತ್ತೂರಿನ ದೈವಸ್ಥಾನದಲ್ಲಿ ಪ್ರಮಾಣದಲ್ಲಿ ಭಾಗಿಯಾದ ಕೆಲವು ಮಂದಿ ಮತ್ತೆ ಕಾನತ್ತೂರಿಗೆ ತೆರಳಿದ್ದು ತಪ್ಪು ಕಾಣಿಕೆ ಹಾಕಿದ್ದಾರೆ ಎಂಬ ಸುದ್ದಿ ಇದೀಗ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾವುದೇ ಖಚಿತವಾದ ಮಾಹಿತಿ ಕಾರ್ಯಕರ್ತರಿಗೆ ತಿಳಿಯದೇ ಇರುವ ಕಾರಣ ಇದೀಗ ಚರ್ಚೆ ನಡೆಸುತ್ತಿದ್ದಾರೆ. ಆದರೆ ಯಾವುದೇ ದಾಖಲೆಗಳು ಇಲ್ಲದ ಕಾರಣ ಚರ್ಚೆಗೆ ಅರ್ಥ ಬಂದಿಲ್ಲ. ಅಂತೂ ಅಡ್ಡ ಮತದಾನದ ಪ್ರಕರಣ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಮುಂದಿನ ಚುನಾವಣೆಯ ಹೊತ್ತಿಗೆ ಬಿಜೆಪಿ ಹಾಗೂ ಸಂಘಪರಿವಾರವು ನಗರ ಪಂಚಾಯತ್ ಚಯನಾವಣೆಯಲ್ಲಿ  ಕೈಗೊಂಡಂತೆ ಹೊಸಬರಿಗೆ ಆದ್ಯತೆ ನೀಡಬೇಕಾದ ಅನಿವಾರ್ಯತೆ ಬರಬಹುದು ಎಂಬುದು  ಕಾರ್ಯಕರ್ತರ ಅಂಬೋಣ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

17 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago