Advertisement

ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ ದೇಶದ ಉಳಿವಿಗೆ ಮತ್ತೊಮ್ಮೆ ಮೋದಿ ಸರ್ಕಾರ- ನಳಿನ್‍ಕುಮಾರ್ ಕಟೀಲ್

Share

ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ, ಕಾಶ್ಮೀರ ಭಾರತದಲ್ಲಿಯೇ ಉಳಿಯಲು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮತ್ತು ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡಲು ಹಾಗು ದೇಶ ಅಭಿವೃದ್ಧಿಯೆಡೆಗೆ ಸಾಗಲು ನರೇಂದ್ರ ಮೋದಿಯವರಂತಹಾ ವಿಶ್ವ ನಾಯಕ ದೇಶದ ಪ್ರಧಾನಿಯಾಗಿರಬೇಕು. ಆ ನಂಬಿಕೆ ಜನರಲ್ಲಿ ಇರುವುದರಿಂದಲೇ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಜನತೆ ಬಯಸಿದ್ದಾರೆ. ಕಳೆದ ಐದು ವರ್ಷದಲ್ಲಿ ದೇಶದಲ್ಲಿ ಅದ್ಭುತ ಅಭಿವೃದ್ಧಿ ಕೆಲಸಗಳು ನಡೆದಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಪರಿವರ್ತನೆ ಸಾಧ್ಯವಾಗಿದೆ ಎಂದರು.

Advertisement
Advertisement

ಶಾಸಕ ಎಸ್.ಅಂಗಾರ , ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ, ಭಾಗೀರಥಿ ಮುರುಳ್ಯ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

2 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

4 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

24 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago