ಸುಳ್ಯ: ಭಾರತ ದೇಶವನ್ನು ಉಳಿಸಲು, ಜನರ ವಿಶ್ವಾಸಕ್ಕೆ ತಕ್ಕಂತೆ ಆಡಳಿತ ನಡೆಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆ ಇದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಡೆದ ರೋಡ್ ಶೋ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ, ಕಾಶ್ಮೀರ ಭಾರತದಲ್ಲಿಯೇ ಉಳಿಯಲು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮತ್ತು ಪಾಕಿಸ್ಥಾನಕ್ಕೆ ತಕ್ಕ ಉತ್ತರ ನೀಡಲು ಹಾಗು ದೇಶ ಅಭಿವೃದ್ಧಿಯೆಡೆಗೆ ಸಾಗಲು ನರೇಂದ್ರ ಮೋದಿಯವರಂತಹಾ ವಿಶ್ವ ನಾಯಕ ದೇಶದ ಪ್ರಧಾನಿಯಾಗಿರಬೇಕು. ಆ ನಂಬಿಕೆ ಜನರಲ್ಲಿ ಇರುವುದರಿಂದಲೇ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಜನತೆ ಬಯಸಿದ್ದಾರೆ. ಕಳೆದ ಐದು ವರ್ಷದಲ್ಲಿ ದೇಶದಲ್ಲಿ ಅದ್ಭುತ ಅಭಿವೃದ್ಧಿ ಕೆಲಸಗಳು ನಡೆದಿದೆ. ಹಳ್ಳಿಯಿಂದ ದಿಲ್ಲಿಯವರೆಗೆ ಪರಿವರ್ತನೆ ಸಾಧ್ಯವಾಗಿದೆ ಎಂದರು.
ಶಾಸಕ ಎಸ್.ಅಂಗಾರ , ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಹೆಗ್ಡೆ, ಸುಬೋದ್ ಶೆಟ್ಟಿ ಮೇನಾಲ, ವೆಂಕಟ್ ದಂಬೆಕೋಡಿ, ಭಾಗೀರಥಿ ಮುರುಳ್ಯ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…