Categories: MIRROR FOCUS

ಸುಳ್ಯದಲ್ಲಿ “ಮನೆಮನೆಯಲ್ಲಿ ಇಂಗುಗುಂಡಿ” ಆಂದೋಲನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯದಲ್ಲಿ ಇದೊಂದು ನೂತನ ಅಭಿಯಾನ. ಇದು ಪ್ರತಿಯೊಬ್ಬರೂ ಗಮನಿಸಿ ಮಾಡಲೇಬೇಕಾದ ಕಾರ್ಯ. ಇದು ಜಲಸಂರಕ್ಷಣೆಯ ಅಭಿಯಾನ. ನೀರು ಉಳಿದರೆ ಮಾತ್ರವೇ ಬದುಕು, ನಿರು ಉಳಿದರೆ ಮಾತ್ರವೇ ಕೃಷಿ. ನೀರು ಉಳಿದರೆ ಮಾತ್ರವೇ ಉಸಿರು. ಹೀಗಾಗಿ ಈಗ ಮಳೆಗಾಲದಲ್ಲಿ ಜಲಸಂರಕ್ಷಣೆಗೆ ಮನೆಮನೆಯಲ್ಲೂ ಇಂಗುಗುಂಡಿಯಾಗಬೇಕು ಎಂಬ ಉದ್ದೇಶದಿಂದ ಸುಳ್ಯದ ಸ್ನೇಹ ಶಾಲೆ ಅಭಿಯಾನ ಮಾಡುತ್ತಿದೆ. ಎಲ್ಲರ ಸಹಕಾರ ಇರಲಿ. ಸುಳ್ಯನ್ಯೂಸ್.ಕಾಂ ಸಹಕಾರ ನೀಡುತ್ತಿದೆ. ಅಭಿಯಾನದ ಜೊತೆ ಇರಲಿದೆ. ತಾಲೂಕಿನ ಎಲ್ಲಾ ಶಾಲೆಗಳಲ್ಲೂ ಈ ಅಭಿಯಾನ ನಡೆದು ಮಕ್ಕಳ ಮೂಲಕ ಮನೆಮನೆಗೆ ತಲುಪಲಿ. ಬನ್ನಿ ಕೈ ಜೋಡಿಸಿ….

Advertisement
Advertisement

ಸುಳ್ಯ: ಮನೆಮನೆಯಲ್ಲಿ  ಇಂಗುಗುಂಡಿ ರಚನೆಯಾಗಬೇಕು, ಈ ಮೂಲಕ ಜಲಸಂರಕ್ಷಣೆಯಾಗಬೇಕು. ಇದು ಅಭಿಯಾನ ಮುಂದೆ ಇದೊಂದು ಕ್ರಾಂತಿಯೇ ಆಗಬೇಕು, ದೇಶದಾದ್ಯಂತ ಜಲ ಸಂರಕ್ಷಣೆಯ ಬಗ್ಗೆ ಒಲವು ಹೆಚ್ಚಬೇಕು. ಇದು ಸ್ನೇಹ ಶಾಲೆಯ ಚಂದ್ರಶೇಖರ ದಾಮ್ಲೆ ಅವರ ಉದ್ದೇಶ.  ಈ ಹಿನ್ನೆಲೆಯಲ್ಲಿ  ಸುಳ್ಯ ತಾಲೂಕಿನ ಶಾಲೆಗಳಲ್ಲಿ  ಜಲಾಮೃತ ಯೋಜನೆಯ ಮೂಲಕ ಮನೆ ಮನೆಯಲ್ಲೂ ಇಂಗು ಗುಂಡಿ ರಚನೆ ಮಾಡಿದ ಅಭಿಯಾನ ಇಂದಿನಿಂದ ಆರಂಭವಾಗುತ್ತಿದೆ.

ಸುಳ್ಯದ ಸ್ನೇಹ ಶಾಲೆಯಲ್ಲಿ  ಈಗಾಗಲೇ ಇಂಗುಗುಂಡಿ ರಚನೆ ಮಾಡಿ ಯಶಸ್ಸು ಕಂಡಿದ್ದಾರೆ. ಇದಾದ ಬಳಿಕ ಮಕ್ಕಳ ಮೂಲಕ ಮನೆಮನೆಯಲ್ಲೂ ಇಂಗುಗುಂಡಿ ರಚನೆ ಮಾಡಿದ ಅದರ ಫೋಟೊ ಮಕ್ಕಳ ಮೂಲಕವೇ ತೆಗೆಸಿ ಶಾಲೆಯಲ್ಲಿ ಬಹುದೊಡ್ಡ ಬ್ಯಾನರ್ ಮೂಲಕ ಪ್ರದರ್ಶನ ಮಾಡಿದ್ದಾರೆ. ಇದೀಗ ಇಡೀ ತಾಲೂಕಿನಲ್ಲೀ ಜಲಸಂರಕ್ಷಣೆ ಮಕ್ಕಳ ಮೂಲಕ ಮನೆ ಮನೆಗೂ ತಲುಪಬೇಕು. ಕನಿಷ್ಟ ಒಂದು ಇಂಗುಗುಂಡಿ ಮಕ್ಕಳ ಮೂಲಕ ನಡೆದರೆ ತಾಲೂಕಿನಲ್ಲಿ ಸಂಗ್ರಹವಾಗುವ , ಭೂಮಿಗೆ ಸೇರುವ ನೀರು ಅಪಾರಪ್ರಮಾಣ. ಹೀಗಾಗಿ ಈ ಯೋಜನೆ ಇಂದಿನಿಂದ ಜಾರಿಯಾಗುತ್ತಿದೆ. ಈ ಯೋಜನೆಗೆ ಮುಂದೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೂ ವಿಸ್ತಾರವಾಗಬೇಕು. ಸುಳ್ಯದಲ್ಲಿ ತೆಗೆದುಕೊಂಡ ಹೆಜ್ಜೆ ವಿಸ್ತಾರವಾಗಲಿ. ಬನ್ನಿ ಒಂದಾಗೋಣ. ಮುಂದೆ ಎಲ್ಲೆಲ್ಲಿ ಈ ಅಭಿಯಾನ ಇರುತ್ತದೆ ಎಂಬುದನ್ನೂ ತಿಳಿಸುತ್ತೇವೆ.

ಇಂದು ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ  ಸಂಜೆ 3 ಗಂಟೆಗೆ ಈ ಅಭಿಯಾನ ಆರಂಭವಾಗಲಿದೆ. ಬನ್ನಿ ಜೊತೆಯಾಗೋಣ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

4 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

12 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

12 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

12 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

12 hours ago