Advertisement
Categories: MIRROR FOCUS

ಸುಳ್ಯದಲ್ಲಿ “ಮನೆಮನೆಯಲ್ಲಿ ಇಂಗುಗುಂಡಿ” ಆಂದೋಲನ

Share

ಸುಳ್ಯದಲ್ಲಿ ಇದೊಂದು ನೂತನ ಅಭಿಯಾನ. ಇದು ಪ್ರತಿಯೊಬ್ಬರೂ ಗಮನಿಸಿ ಮಾಡಲೇಬೇಕಾದ ಕಾರ್ಯ. ಇದು ಜಲಸಂರಕ್ಷಣೆಯ ಅಭಿಯಾನ. ನೀರು ಉಳಿದರೆ ಮಾತ್ರವೇ ಬದುಕು, ನಿರು ಉಳಿದರೆ ಮಾತ್ರವೇ ಕೃಷಿ. ನೀರು ಉಳಿದರೆ ಮಾತ್ರವೇ ಉಸಿರು. ಹೀಗಾಗಿ ಈಗ ಮಳೆಗಾಲದಲ್ಲಿ ಜಲಸಂರಕ್ಷಣೆಗೆ ಮನೆಮನೆಯಲ್ಲೂ ಇಂಗುಗುಂಡಿಯಾಗಬೇಕು ಎಂಬ ಉದ್ದೇಶದಿಂದ ಸುಳ್ಯದ ಸ್ನೇಹ ಶಾಲೆ ಅಭಿಯಾನ ಮಾಡುತ್ತಿದೆ. ಎಲ್ಲರ ಸಹಕಾರ ಇರಲಿ. ಸುಳ್ಯನ್ಯೂಸ್.ಕಾಂ ಸಹಕಾರ ನೀಡುತ್ತಿದೆ. ಅಭಿಯಾನದ ಜೊತೆ ಇರಲಿದೆ. ತಾಲೂಕಿನ ಎಲ್ಲಾ ಶಾಲೆಗಳಲ್ಲೂ ಈ ಅಭಿಯಾನ ನಡೆದು ಮಕ್ಕಳ ಮೂಲಕ ಮನೆಮನೆಗೆ ತಲುಪಲಿ. ಬನ್ನಿ ಕೈ ಜೋಡಿಸಿ….

ಸುಳ್ಯ: ಮನೆಮನೆಯಲ್ಲಿ  ಇಂಗುಗುಂಡಿ ರಚನೆಯಾಗಬೇಕು, ಈ ಮೂಲಕ ಜಲಸಂರಕ್ಷಣೆಯಾಗಬೇಕು. ಇದು ಅಭಿಯಾನ ಮುಂದೆ ಇದೊಂದು ಕ್ರಾಂತಿಯೇ ಆಗಬೇಕು, ದೇಶದಾದ್ಯಂತ ಜಲ ಸಂರಕ್ಷಣೆಯ ಬಗ್ಗೆ ಒಲವು ಹೆಚ್ಚಬೇಕು. ಇದು ಸ್ನೇಹ ಶಾಲೆಯ ಚಂದ್ರಶೇಖರ ದಾಮ್ಲೆ ಅವರ ಉದ್ದೇಶ.  ಈ ಹಿನ್ನೆಲೆಯಲ್ಲಿ  ಸುಳ್ಯ ತಾಲೂಕಿನ ಶಾಲೆಗಳಲ್ಲಿ  ಜಲಾಮೃತ ಯೋಜನೆಯ ಮೂಲಕ ಮನೆ ಮನೆಯಲ್ಲೂ ಇಂಗು ಗುಂಡಿ ರಚನೆ ಮಾಡಿದ ಅಭಿಯಾನ ಇಂದಿನಿಂದ ಆರಂಭವಾಗುತ್ತಿದೆ.

ಸುಳ್ಯದ ಸ್ನೇಹ ಶಾಲೆಯಲ್ಲಿ  ಈಗಾಗಲೇ ಇಂಗುಗುಂಡಿ ರಚನೆ ಮಾಡಿ ಯಶಸ್ಸು ಕಂಡಿದ್ದಾರೆ. ಇದಾದ ಬಳಿಕ ಮಕ್ಕಳ ಮೂಲಕ ಮನೆಮನೆಯಲ್ಲೂ ಇಂಗುಗುಂಡಿ ರಚನೆ ಮಾಡಿದ ಅದರ ಫೋಟೊ ಮಕ್ಕಳ ಮೂಲಕವೇ ತೆಗೆಸಿ ಶಾಲೆಯಲ್ಲಿ ಬಹುದೊಡ್ಡ ಬ್ಯಾನರ್ ಮೂಲಕ ಪ್ರದರ್ಶನ ಮಾಡಿದ್ದಾರೆ. ಇದೀಗ ಇಡೀ ತಾಲೂಕಿನಲ್ಲೀ ಜಲಸಂರಕ್ಷಣೆ ಮಕ್ಕಳ ಮೂಲಕ ಮನೆ ಮನೆಗೂ ತಲುಪಬೇಕು. ಕನಿಷ್ಟ ಒಂದು ಇಂಗುಗುಂಡಿ ಮಕ್ಕಳ ಮೂಲಕ ನಡೆದರೆ ತಾಲೂಕಿನಲ್ಲಿ ಸಂಗ್ರಹವಾಗುವ , ಭೂಮಿಗೆ ಸೇರುವ ನೀರು ಅಪಾರಪ್ರಮಾಣ. ಹೀಗಾಗಿ ಈ ಯೋಜನೆ ಇಂದಿನಿಂದ ಜಾರಿಯಾಗುತ್ತಿದೆ. ಈ ಯೋಜನೆಗೆ ಮುಂದೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೂ ವಿಸ್ತಾರವಾಗಬೇಕು. ಸುಳ್ಯದಲ್ಲಿ ತೆಗೆದುಕೊಂಡ ಹೆಜ್ಜೆ ವಿಸ್ತಾರವಾಗಲಿ. ಬನ್ನಿ ಒಂದಾಗೋಣ. ಮುಂದೆ ಎಲ್ಲೆಲ್ಲಿ ಈ ಅಭಿಯಾನ ಇರುತ್ತದೆ ಎಂಬುದನ್ನೂ ತಿಳಿಸುತ್ತೇವೆ.

ಇಂದು ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ  ಸಂಜೆ 3 ಗಂಟೆಗೆ ಈ ಅಭಿಯಾನ ಆರಂಭವಾಗಲಿದೆ. ಬನ್ನಿ ಜೊತೆಯಾಗೋಣ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

1 hour ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

2 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago