Advertisement
Categories: MIRROR FOCUS

ಸುಳ್ಯದಲ್ಲಿ “ಮನೆಮನೆಯಲ್ಲಿ ಇಂಗುಗುಂಡಿ” ಆಂದೋಲನ

Share

ಸುಳ್ಯದಲ್ಲಿ ಇದೊಂದು ನೂತನ ಅಭಿಯಾನ. ಇದು ಪ್ರತಿಯೊಬ್ಬರೂ ಗಮನಿಸಿ ಮಾಡಲೇಬೇಕಾದ ಕಾರ್ಯ. ಇದು ಜಲಸಂರಕ್ಷಣೆಯ ಅಭಿಯಾನ. ನೀರು ಉಳಿದರೆ ಮಾತ್ರವೇ ಬದುಕು, ನಿರು ಉಳಿದರೆ ಮಾತ್ರವೇ ಕೃಷಿ. ನೀರು ಉಳಿದರೆ ಮಾತ್ರವೇ ಉಸಿರು. ಹೀಗಾಗಿ ಈಗ ಮಳೆಗಾಲದಲ್ಲಿ ಜಲಸಂರಕ್ಷಣೆಗೆ ಮನೆಮನೆಯಲ್ಲೂ ಇಂಗುಗುಂಡಿಯಾಗಬೇಕು ಎಂಬ ಉದ್ದೇಶದಿಂದ ಸುಳ್ಯದ ಸ್ನೇಹ ಶಾಲೆ ಅಭಿಯಾನ ಮಾಡುತ್ತಿದೆ. ಎಲ್ಲರ ಸಹಕಾರ ಇರಲಿ. ಸುಳ್ಯನ್ಯೂಸ್.ಕಾಂ ಸಹಕಾರ ನೀಡುತ್ತಿದೆ. ಅಭಿಯಾನದ ಜೊತೆ ಇರಲಿದೆ. ತಾಲೂಕಿನ ಎಲ್ಲಾ ಶಾಲೆಗಳಲ್ಲೂ ಈ ಅಭಿಯಾನ ನಡೆದು ಮಕ್ಕಳ ಮೂಲಕ ಮನೆಮನೆಗೆ ತಲುಪಲಿ. ಬನ್ನಿ ಕೈ ಜೋಡಿಸಿ….

ಸುಳ್ಯ: ಮನೆಮನೆಯಲ್ಲಿ  ಇಂಗುಗುಂಡಿ ರಚನೆಯಾಗಬೇಕು, ಈ ಮೂಲಕ ಜಲಸಂರಕ್ಷಣೆಯಾಗಬೇಕು. ಇದು ಅಭಿಯಾನ ಮುಂದೆ ಇದೊಂದು ಕ್ರಾಂತಿಯೇ ಆಗಬೇಕು, ದೇಶದಾದ್ಯಂತ ಜಲ ಸಂರಕ್ಷಣೆಯ ಬಗ್ಗೆ ಒಲವು ಹೆಚ್ಚಬೇಕು. ಇದು ಸ್ನೇಹ ಶಾಲೆಯ ಚಂದ್ರಶೇಖರ ದಾಮ್ಲೆ ಅವರ ಉದ್ದೇಶ.  ಈ ಹಿನ್ನೆಲೆಯಲ್ಲಿ  ಸುಳ್ಯ ತಾಲೂಕಿನ ಶಾಲೆಗಳಲ್ಲಿ  ಜಲಾಮೃತ ಯೋಜನೆಯ ಮೂಲಕ ಮನೆ ಮನೆಯಲ್ಲೂ ಇಂಗು ಗುಂಡಿ ರಚನೆ ಮಾಡಿದ ಅಭಿಯಾನ ಇಂದಿನಿಂದ ಆರಂಭವಾಗುತ್ತಿದೆ.

ಸುಳ್ಯದ ಸ್ನೇಹ ಶಾಲೆಯಲ್ಲಿ  ಈಗಾಗಲೇ ಇಂಗುಗುಂಡಿ ರಚನೆ ಮಾಡಿ ಯಶಸ್ಸು ಕಂಡಿದ್ದಾರೆ. ಇದಾದ ಬಳಿಕ ಮಕ್ಕಳ ಮೂಲಕ ಮನೆಮನೆಯಲ್ಲೂ ಇಂಗುಗುಂಡಿ ರಚನೆ ಮಾಡಿದ ಅದರ ಫೋಟೊ ಮಕ್ಕಳ ಮೂಲಕವೇ ತೆಗೆಸಿ ಶಾಲೆಯಲ್ಲಿ ಬಹುದೊಡ್ಡ ಬ್ಯಾನರ್ ಮೂಲಕ ಪ್ರದರ್ಶನ ಮಾಡಿದ್ದಾರೆ. ಇದೀಗ ಇಡೀ ತಾಲೂಕಿನಲ್ಲೀ ಜಲಸಂರಕ್ಷಣೆ ಮಕ್ಕಳ ಮೂಲಕ ಮನೆ ಮನೆಗೂ ತಲುಪಬೇಕು. ಕನಿಷ್ಟ ಒಂದು ಇಂಗುಗುಂಡಿ ಮಕ್ಕಳ ಮೂಲಕ ನಡೆದರೆ ತಾಲೂಕಿನಲ್ಲಿ ಸಂಗ್ರಹವಾಗುವ , ಭೂಮಿಗೆ ಸೇರುವ ನೀರು ಅಪಾರಪ್ರಮಾಣ. ಹೀಗಾಗಿ ಈ ಯೋಜನೆ ಇಂದಿನಿಂದ ಜಾರಿಯಾಗುತ್ತಿದೆ. ಈ ಯೋಜನೆಗೆ ಮುಂದೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದವರೆಗೂ ವಿಸ್ತಾರವಾಗಬೇಕು. ಸುಳ್ಯದಲ್ಲಿ ತೆಗೆದುಕೊಂಡ ಹೆಜ್ಜೆ ವಿಸ್ತಾರವಾಗಲಿ. ಬನ್ನಿ ಒಂದಾಗೋಣ. ಮುಂದೆ ಎಲ್ಲೆಲ್ಲಿ ಈ ಅಭಿಯಾನ ಇರುತ್ತದೆ ಎಂಬುದನ್ನೂ ತಿಳಿಸುತ್ತೇವೆ.

ಇಂದು ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ  ಸಂಜೆ 3 ಗಂಟೆಗೆ ಈ ಅಭಿಯಾನ ಆರಂಭವಾಗಲಿದೆ. ಬನ್ನಿ ಜೊತೆಯಾಗೋಣ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

4 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

5 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

13 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

22 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago