ಸುಳ್ಯದಲ್ಲಿ ಮಳೆ : ಜಿಲ್ಲೆಯಲ್ಲೂ ಮಳೆ

June 13, 2019
2:53 PM

ಸುಳ್ಯ: ಸುಳ್ಯದಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಹಗಲು 11 ಗಂಟೆಯಿಂದ ಆರಂಭಗೊಂಡ ಮಳೆ ಮುಂದುವರಿದಿದೆ. ಮೋಡ ಕವಿದಿದ್ದು ಕತ್ತಲು ಕವಿದ ವಾತಾವರಣ ಇದೆ. ಮಳೆಯ ಕಾರಣದಿಂದ ಅಲ್ಲಲ್ಲಿ  ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲಿ  ನೀರು ಹರಿಯುತ್ತಿದೆ. ವಾಹನಗಳು ಸಾಗುವಾಗ  ಕೆಸರು ನೀರು ಸಿಂಚನವಾಗುತ್ತಿದೆ. ಇಲಾಖೆಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಜನಪ್ರತಿನಿಧಿಗಳು ತಕ್ಷಣವೇ ಸೂಚನೆ ನೀಡಬೇಕಿದೆ.

Advertisement

ಮಂಗಳೂರು ಪ್ರದೇಶದಲ್ಲಿ  ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 120 ಮಿಲಿಮೀಟರ್ ಮಳೆಯಾಗಿದೆ. ಬತ್ತಿದ್ದ  ನೇತ್ರಾವತಿ , ಕುಮಾರಧಾರಾ ನದಿಯಲ್ಲಿ  ನೀರು ಹರಿಯುಲು ಆರಂಭಿಸಿದೆ. ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.  ಚಂಡಮಾರುತದ ಕಾರಣದಿಂದ  ದೊಡ್ಡ ದೊಡ್ಡ ಸಮುದ್ರದ  ಅಲೆಗಳು  ತೀರದಲ್ಲಿ ಅ ಪ್ಪಳಿಸುತ್ತಿದೆ. ಜಿಲ್ಲೆಯಾದ್ಯಂತ ಮಳೆ ಮೋಡ ಆವರಿಸಿದೆ. ಸಿಡಿಲು ಗುಡುಗು ಮಿಶ್ರಿತ ಮಳೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ   ವಿದ್ಯುತ್ ವ್ಯತ್ಯಯ,  ಮರ ಉರುಳಿದ್ದು ಬಿಟ್ಟರೆ ಯಾವುದೇ ಅನಾಹುತಗಳಾಗಿಲ್ಲ. ಸೋಮೇಶ್ವರ-ಉಚ್ಚಿಲ ಭಾಗದಲ್ಲಿ ಒಂದು ಮನೆ ನಿನ್ನೆ ಸಂಜೆ ವೇಳೆ ಸಮುದ್ರ ಪಾಲಾಗಿದೆ. ಕಡಲು ಕೊರತೆ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿದ್ದಾರೆ.

 

 

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ
July 14, 2025
7:00 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group