ಸುಳ್ಯ: ಸುಳ್ಯದಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಹಗಲು 11 ಗಂಟೆಯಿಂದ ಆರಂಭಗೊಂಡ ಮಳೆ ಮುಂದುವರಿದಿದೆ. ಮೋಡ ಕವಿದಿದ್ದು ಕತ್ತಲು ಕವಿದ ವಾತಾವರಣ ಇದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ವಾಹನಗಳು ಸಾಗುವಾಗ ಕೆಸರು ನೀರು ಸಿಂಚನವಾಗುತ್ತಿದೆ. ಇಲಾಖೆಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಜನಪ್ರತಿನಿಧಿಗಳು ತಕ್ಷಣವೇ ಸೂಚನೆ ನೀಡಬೇಕಿದೆ.
ಮಂಗಳೂರು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 120 ಮಿಲಿಮೀಟರ್ ಮಳೆಯಾಗಿದೆ. ಬತ್ತಿದ್ದ ನೇತ್ರಾವತಿ , ಕುಮಾರಧಾರಾ ನದಿಯಲ್ಲಿ ನೀರು ಹರಿಯುಲು ಆರಂಭಿಸಿದೆ. ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಚಂಡಮಾರುತದ ಕಾರಣದಿಂದ ದೊಡ್ಡ ದೊಡ್ಡ ಸಮುದ್ರದ ಅಲೆಗಳು ತೀರದಲ್ಲಿ ಅ ಪ್ಪಳಿಸುತ್ತಿದೆ. ಜಿಲ್ಲೆಯಾದ್ಯಂತ ಮಳೆ ಮೋಡ ಆವರಿಸಿದೆ. ಸಿಡಿಲು ಗುಡುಗು ಮಿಶ್ರಿತ ಮಳೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ, ಮರ ಉರುಳಿದ್ದು ಬಿಟ್ಟರೆ ಯಾವುದೇ ಅನಾಹುತಗಳಾಗಿಲ್ಲ. ಸೋಮೇಶ್ವರ-ಉಚ್ಚಿಲ ಭಾಗದಲ್ಲಿ ಒಂದು ಮನೆ ನಿನ್ನೆ ಸಂಜೆ ವೇಳೆ ಸಮುದ್ರ ಪಾಲಾಗಿದೆ. ಕಡಲು ಕೊರತೆ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…