ಸುಳ್ಯ: ಸುಳ್ಯದಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಹಗಲು 11 ಗಂಟೆಯಿಂದ ಆರಂಭಗೊಂಡ ಮಳೆ ಮುಂದುವರಿದಿದೆ. ಮೋಡ ಕವಿದಿದ್ದು ಕತ್ತಲು ಕವಿದ ವಾತಾವರಣ ಇದೆ. ಮಳೆಯ ಕಾರಣದಿಂದ ಅಲ್ಲಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ವಾಹನಗಳು ಸಾಗುವಾಗ ಕೆಸರು ನೀರು ಸಿಂಚನವಾಗುತ್ತಿದೆ. ಇಲಾಖೆಗಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಜನಪ್ರತಿನಿಧಿಗಳು ತಕ್ಷಣವೇ ಸೂಚನೆ ನೀಡಬೇಕಿದೆ.
ಮಂಗಳೂರು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 120 ಮಿಲಿಮೀಟರ್ ಮಳೆಯಾಗಿದೆ. ಬತ್ತಿದ್ದ ನೇತ್ರಾವತಿ , ಕುಮಾರಧಾರಾ ನದಿಯಲ್ಲಿ ನೀರು ಹರಿಯುಲು ಆರಂಭಿಸಿದೆ. ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ. ಚಂಡಮಾರುತದ ಕಾರಣದಿಂದ ದೊಡ್ಡ ದೊಡ್ಡ ಸಮುದ್ರದ ಅಲೆಗಳು ತೀರದಲ್ಲಿ ಅ ಪ್ಪಳಿಸುತ್ತಿದೆ. ಜಿಲ್ಲೆಯಾದ್ಯಂತ ಮಳೆ ಮೋಡ ಆವರಿಸಿದೆ. ಸಿಡಿಲು ಗುಡುಗು ಮಿಶ್ರಿತ ಮಳೆಯಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ, ಮರ ಉರುಳಿದ್ದು ಬಿಟ್ಟರೆ ಯಾವುದೇ ಅನಾಹುತಗಳಾಗಿಲ್ಲ. ಸೋಮೇಶ್ವರ-ಉಚ್ಚಿಲ ಭಾಗದಲ್ಲಿ ಒಂದು ಮನೆ ನಿನ್ನೆ ಸಂಜೆ ವೇಳೆ ಸಮುದ್ರ ಪಾಲಾಗಿದೆ. ಕಡಲು ಕೊರತೆ ಪ್ರದೇಶಕ್ಕೆ ಸಂಸದ ನಳಿನ್ ಕುಮಾರ್ ಭೇಟಿ ನೀಡಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…