ಸುದ್ದಿಗಳು

ಸುಳ್ಯದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು ಶಿಕ್ಷಣ ಸಚಿವರ ಸರಳ ನಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಯಾವುದೇ ಜನಪ್ರತಿನಿಧಿ ಭೇಟಿಯಾಗಬೇಕಾದರೆ ಕೆಲವು ದಿನಗಳ ಮುಂದೆಯೇ ಮಾತುಕತೆ ಮಾಡಬೇಕು. ಇಷ್ಟೆಲ್ಲಾ ಆದರೂ ಭೇಟಿಯ ಸಮಯ ಕೆಲವೇ ನಿಮಿಷ ಮಾತ್ರಾ. ಆದರೆ ಕೆಲವು ಜನಪ್ರತಿನಿಧಿಗಳು ಸಿಂಪಲ್ ಆಗಿರುತ್ತಾರೆ, ಇದಕ್ಕೊಂದು ಉದಾಹರಣೆ ಶಿಕ್ಷಣ ಸಚಿವ ಸುರೇಶ್ ಕುಮಾರ್.

Advertisement
Advertisement

ಶನಿವಾರ ಮಡಿಕೇರಿ ಕಡೆಗೆ ಭೇಟಿ ನೀಡುವ ವೇಳೆ ಸುಳ್ಯದ ಹೋಟೆಲ್ ಬಳಿ ಚಹಾಕ್ಕೆಂದು ನಿಲ್ಲಿಸಿದ್ದರು. ಈ ಸಂದರ್ಭ ಸುಳ್ಯದ ಹಲವು ಮಂದಿಯನ್ನು ಮಾತನಾಡಿಸಿದರು. ಇವರಲ್ಲಿ  ಪುತ್ತೂರು ತಾಲೂಕಿನ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಪ್ರಕಾಶ ಮೂಡಿತ್ತಾಯ ಹಾಗೂ ಸುಳ್ಯ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿರುವ ಶಿಕ್ಷಕ ಡಾ. ಸುಂದರ ಕೇನಾಜೆ ಸಚಿವರ ಗಮನ ಸೆಳೆಸಿದ್ದಾರೆ. ಈ ಬಗ್ಗೆ ಸಚಿವರು ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.  ಎಲ್ಲೇ ಭೇಟಿ ನೀಡಿದರೂ ಜನಸಾಮಾನ್ಯರ ಬಗ್ಗೆ, ಉತ್ತಮ ಚಟುವಟಿಕೆಗಳ ಬಗ್ಗೆ ಪೇಸ್ ಬುಕ್ ನಲ್ಲಿ  ಬರೆದುಕೊಳ್ಳುವ ಸಚಿವರು ಕೆಲವು ಸಮಸ್ಯೆಗಳಿಗೆ ಸ್ವತ: ಪ್ರತಿಕ್ರಿಯೆ ನೀಡುತ್ತಾರೆ, ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತಾರೆ. ಹೀಗಾಗಿ ರಾಜ್ಯದ ಜನಪ್ರಿಯ ಸಚಿವ ಎನಿಸಿಕೊಂಡಿದ್ದಾರೆ ಮಾತ್ರವಲ್ಲ ಉತ್ತಮ ಆಡಳಿತ ನಡೆಸುವ ಸಚಿವರೂ ಆಗಿದ್ದಾರೆ.

ಸುಳ್ಯದಲ್ಲಿ ಭೇಟಿಯಾದ ಪ್ರಕಾಶ ಮೂಡಿತ್ತಾಯ ಹಾಗೂ  ಡಾ. ಸುಂದರ ಕೇನಾಜೆ ಯಕ್ಷಗಾನ ಕುರಿತ ಪಠ್ಯಪುಸ್ತಕವನ್ನು ನೀಡಿದ್ದರು. ಈ ಬಗ್ಗೆ ಆಸಕ್ತ ಹಾಗೂ ಸಂತಸ ವ್ಯಕ್ತ ಪಡಿಸಿದ ಸಚಿವರು “ಇಂತಹ ಸೃಜನಶೀಲ ಶಿಕ್ಷಕರ ಭೇಟಿ ಆದಾಗ ನನ್ನ ಉತ್ಸಾಹ ನೂರ್ಪಾಲು ಹೆಚ್ಚುತ್ತದೆ “ ಎಂದು ಹೇಳಿಕೊಂಡಿದ್ದಾರೆ.

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

4 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

7 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

7 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

8 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

16 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

16 hours ago