ಸುಳ್ಯ: ಯಾವುದೇ ಜನಪ್ರತಿನಿಧಿ ಭೇಟಿಯಾಗಬೇಕಾದರೆ ಕೆಲವು ದಿನಗಳ ಮುಂದೆಯೇ ಮಾತುಕತೆ ಮಾಡಬೇಕು. ಇಷ್ಟೆಲ್ಲಾ ಆದರೂ ಭೇಟಿಯ ಸಮಯ ಕೆಲವೇ ನಿಮಿಷ ಮಾತ್ರಾ. ಆದರೆ ಕೆಲವು ಜನಪ್ರತಿನಿಧಿಗಳು ಸಿಂಪಲ್ ಆಗಿರುತ್ತಾರೆ, ಇದಕ್ಕೊಂದು ಉದಾಹರಣೆ ಶಿಕ್ಷಣ ಸಚಿವ ಸುರೇಶ್ ಕುಮಾರ್.
ಶನಿವಾರ ಮಡಿಕೇರಿ ಕಡೆಗೆ ಭೇಟಿ ನೀಡುವ ವೇಳೆ ಸುಳ್ಯದ ಹೋಟೆಲ್ ಬಳಿ ಚಹಾಕ್ಕೆಂದು ನಿಲ್ಲಿಸಿದ್ದರು. ಈ ಸಂದರ್ಭ ಸುಳ್ಯದ ಹಲವು ಮಂದಿಯನ್ನು ಮಾತನಾಡಿಸಿದರು. ಇವರಲ್ಲಿ ಪುತ್ತೂರು ತಾಲೂಕಿನ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಪ್ರಕಾಶ ಮೂಡಿತ್ತಾಯ ಹಾಗೂ ಸುಳ್ಯ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿರುವ ಶಿಕ್ಷಕ ಡಾ. ಸುಂದರ ಕೇನಾಜೆ ಸಚಿವರ ಗಮನ ಸೆಳೆಸಿದ್ದಾರೆ. ಈ ಬಗ್ಗೆ ಸಚಿವರು ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಎಲ್ಲೇ ಭೇಟಿ ನೀಡಿದರೂ ಜನಸಾಮಾನ್ಯರ ಬಗ್ಗೆ, ಉತ್ತಮ ಚಟುವಟಿಕೆಗಳ ಬಗ್ಗೆ ಪೇಸ್ ಬುಕ್ ನಲ್ಲಿ ಬರೆದುಕೊಳ್ಳುವ ಸಚಿವರು ಕೆಲವು ಸಮಸ್ಯೆಗಳಿಗೆ ಸ್ವತ: ಪ್ರತಿಕ್ರಿಯೆ ನೀಡುತ್ತಾರೆ, ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತಾರೆ. ಹೀಗಾಗಿ ರಾಜ್ಯದ ಜನಪ್ರಿಯ ಸಚಿವ ಎನಿಸಿಕೊಂಡಿದ್ದಾರೆ ಮಾತ್ರವಲ್ಲ ಉತ್ತಮ ಆಡಳಿತ ನಡೆಸುವ ಸಚಿವರೂ ಆಗಿದ್ದಾರೆ.
ಸುಳ್ಯದಲ್ಲಿ ಭೇಟಿಯಾದ ಪ್ರಕಾಶ ಮೂಡಿತ್ತಾಯ ಹಾಗೂ ಡಾ. ಸುಂದರ ಕೇನಾಜೆ ಯಕ್ಷಗಾನ ಕುರಿತ ಪಠ್ಯಪುಸ್ತಕವನ್ನು ನೀಡಿದ್ದರು. ಈ ಬಗ್ಗೆ ಆಸಕ್ತ ಹಾಗೂ ಸಂತಸ ವ್ಯಕ್ತ ಪಡಿಸಿದ ಸಚಿವರು “ಇಂತಹ ಸೃಜನಶೀಲ ಶಿಕ್ಷಕರ ಭೇಟಿ ಆದಾಗ ನನ್ನ ಉತ್ಸಾಹ ನೂರ್ಪಾಲು ಹೆಚ್ಚುತ್ತದೆ “ ಎಂದು ಹೇಳಿಕೊಂಡಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…