Advertisement
ಸುದ್ದಿಗಳು

ಸುಳ್ಯದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು ಶಿಕ್ಷಣ ಸಚಿವರ ಸರಳ ನಡೆ

Share

ಸುಳ್ಯ: ಯಾವುದೇ ಜನಪ್ರತಿನಿಧಿ ಭೇಟಿಯಾಗಬೇಕಾದರೆ ಕೆಲವು ದಿನಗಳ ಮುಂದೆಯೇ ಮಾತುಕತೆ ಮಾಡಬೇಕು. ಇಷ್ಟೆಲ್ಲಾ ಆದರೂ ಭೇಟಿಯ ಸಮಯ ಕೆಲವೇ ನಿಮಿಷ ಮಾತ್ರಾ. ಆದರೆ ಕೆಲವು ಜನಪ್ರತಿನಿಧಿಗಳು ಸಿಂಪಲ್ ಆಗಿರುತ್ತಾರೆ, ಇದಕ್ಕೊಂದು ಉದಾಹರಣೆ ಶಿಕ್ಷಣ ಸಚಿವ ಸುರೇಶ್ ಕುಮಾರ್.

Advertisement

ಶನಿವಾರ ಮಡಿಕೇರಿ ಕಡೆಗೆ ಭೇಟಿ ನೀಡುವ ವೇಳೆ ಸುಳ್ಯದ ಹೋಟೆಲ್ ಬಳಿ ಚಹಾಕ್ಕೆಂದು ನಿಲ್ಲಿಸಿದ್ದರು. ಈ ಸಂದರ್ಭ ಸುಳ್ಯದ ಹಲವು ಮಂದಿಯನ್ನು ಮಾತನಾಡಿಸಿದರು. ಇವರಲ್ಲಿ  ಪುತ್ತೂರು ತಾಲೂಕಿನ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕರಾದ ಪ್ರಕಾಶ ಮೂಡಿತ್ತಾಯ ಹಾಗೂ ಸುಳ್ಯ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿರುವ ಶಿಕ್ಷಕ ಡಾ. ಸುಂದರ ಕೇನಾಜೆ ಸಚಿವರ ಗಮನ ಸೆಳೆಸಿದ್ದಾರೆ. ಈ ಬಗ್ಗೆ ಸಚಿವರು ತಮ್ಮ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.  ಎಲ್ಲೇ ಭೇಟಿ ನೀಡಿದರೂ ಜನಸಾಮಾನ್ಯರ ಬಗ್ಗೆ, ಉತ್ತಮ ಚಟುವಟಿಕೆಗಳ ಬಗ್ಗೆ ಪೇಸ್ ಬುಕ್ ನಲ್ಲಿ  ಬರೆದುಕೊಳ್ಳುವ ಸಚಿವರು ಕೆಲವು ಸಮಸ್ಯೆಗಳಿಗೆ ಸ್ವತ: ಪ್ರತಿಕ್ರಿಯೆ ನೀಡುತ್ತಾರೆ, ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತಾರೆ. ಹೀಗಾಗಿ ರಾಜ್ಯದ ಜನಪ್ರಿಯ ಸಚಿವ ಎನಿಸಿಕೊಂಡಿದ್ದಾರೆ ಮಾತ್ರವಲ್ಲ ಉತ್ತಮ ಆಡಳಿತ ನಡೆಸುವ ಸಚಿವರೂ ಆಗಿದ್ದಾರೆ.

ಸುಳ್ಯದಲ್ಲಿ ಭೇಟಿಯಾದ ಪ್ರಕಾಶ ಮೂಡಿತ್ತಾಯ ಹಾಗೂ  ಡಾ. ಸುಂದರ ಕೇನಾಜೆ ಯಕ್ಷಗಾನ ಕುರಿತ ಪಠ್ಯಪುಸ್ತಕವನ್ನು ನೀಡಿದ್ದರು. ಈ ಬಗ್ಗೆ ಆಸಕ್ತ ಹಾಗೂ ಸಂತಸ ವ್ಯಕ್ತ ಪಡಿಸಿದ ಸಚಿವರು “ಇಂತಹ ಸೃಜನಶೀಲ ಶಿಕ್ಷಕರ ಭೇಟಿ ಆದಾಗ ನನ್ನ ಉತ್ಸಾಹ ನೂರ್ಪಾಲು ಹೆಚ್ಚುತ್ತದೆ “ ಎಂದು ಹೇಳಿಕೊಂಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

24 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago