ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಎಂಟು ತಂಡಗಳು ಭಾಗವಹಿಸಿದ ಲೀಗ್ ಮಾದರಿಯ ಪಂದ್ಯಾಟ ಲಗೋರಿ ಪ್ರಿಯರ ಮನ ರಂಜಿಸಿತು. ಹನುಮಾನ್ ಲಗೋರಿಯನ್ ಮಂಗಳೂರು, ಚಿಕ್ಕಮಗಳೂರು ಜಿಲ್ಲಾ ತಂಡ, ಪಂಚ ಶ್ರೀ ಪಂಜ, ವಿದ್ಯಾರಶ್ಮಿ ವಿದ್ಯಾಲಯ, ಚಿಗುರು ಯುವಕ ಮಂಡಲ ಪೆರಾಜೆ, ಕೆ.ವಿ.ಜಿ ವಿದ್ಯಾಸಂಸ್ಥೆ ತಂಡ, ಗರುಡ ಚೊಕ್ಕಾಡಿ, ಕೊಡಗು ತಂಡ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು.
ದ.ಕ.ಜಿಲ್ಲಾ ಲಗೋರಿ ಅಸೋಸಿಯೇಷನ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಉದ್ಘಾಟಿಸಿದರು. ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಸದಸ್ಯ ವಿನಯಕುಮಾರ್ ಕಂದಡ್ಕ, ತಾಲೂ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ಬಿ.ಕೆ.ಮಾಧವ, ಸೀತಾರಾಮ ಕೇವಳ, ಲಗೋರಿ ಅಸೋಸಿಯೇಷನ್ ತಾಲೂಕು ಕಾರ್ಯದರ್ಶಿ ವಿಶ್ವನಾಥ್ ಕೆ ಉಪಸ್ಥಿತರಿದ್ದರು.
ಜಿಲ್ಲಾ ಲಗೋರಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ ಪ್ರಸ್ತಾವನೆಗೈದರು. ತೀರ್ಥವರ್ಣ ವಂದಿಸಿದರು. ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…