ಸುಳ್ಯ: ಜೂನ್ 8 ಮತ್ತು 9ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದ ಮುಂಭಾಗದ ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ 10 ಮತ್ತು ಕೊಡಗು ಹಾಸನ ಮೈಸೂರು ಚಿಕ್ಕಮಗಳೂರು ಬೆಂಗಳೂರು ಮಂಡ್ಯ ಜಿಲ್ಲೆಯ 6 ತಂಡಗಳು ಭಾಗವಹಿಸಲಿವೆ.
ಈ ಬಗ್ಗೆ ಸಂಘಟನಾ ಸಮಿತಿ ರಚಿಸಲಾಗಿದೆ. ದ.ಕ.ಜಿಲ್ಲಾ ಅಸೋಸಿಯೇಶನ್ ನ ಉಪಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು. ಜಿಲ್ಲಾ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಉಪಾಧ್ಯಕ್ಷ ಬಿ.ಕೆ.ಮಾಧವ ವಂದಿಸಿದರು. ಕೋಶಾಧಿಕಾರಿ ಸಂತೋಷ್ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು.
ಸಂಘಟನಾ ಸಮತಿ:
ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್.ಗಂಗಾಧರ, ಸಂಯೋಜಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ನವೀನ್ ಕಜೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…