ಸುಳ್ಯ: ಜೂನ್ 8 ಮತ್ತು 9ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದ ಮುಂಭಾಗದ ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ 10 ಮತ್ತು ಕೊಡಗು ಹಾಸನ ಮೈಸೂರು ಚಿಕ್ಕಮಗಳೂರು ಬೆಂಗಳೂರು ಮಂಡ್ಯ ಜಿಲ್ಲೆಯ 6 ತಂಡಗಳು ಭಾಗವಹಿಸಲಿವೆ.
ಈ ಬಗ್ಗೆ ಸಂಘಟನಾ ಸಮಿತಿ ರಚಿಸಲಾಗಿದೆ. ದ.ಕ.ಜಿಲ್ಲಾ ಅಸೋಸಿಯೇಶನ್ ನ ಉಪಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು. ಜಿಲ್ಲಾ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಉಪಾಧ್ಯಕ್ಷ ಬಿ.ಕೆ.ಮಾಧವ ವಂದಿಸಿದರು. ಕೋಶಾಧಿಕಾರಿ ಸಂತೋಷ್ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು.
ಸಂಘಟನಾ ಸಮತಿ:
ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್.ಗಂಗಾಧರ, ಸಂಯೋಜಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ನವೀನ್ ಕಜೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…