ಸುಳ್ಯ: ಜೂನ್ 8 ಮತ್ತು 9ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದ ಮುಂಭಾಗದ ಸ.ಪ.ಪೂ.ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ದ ಕ ಜಿಲ್ಲಾ ಲಗೋರಿ ಅಸೋಸಿಯೇಷನ್ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ 10 ಮತ್ತು ಕೊಡಗು ಹಾಸನ ಮೈಸೂರು ಚಿಕ್ಕಮಗಳೂರು ಬೆಂಗಳೂರು ಮಂಡ್ಯ ಜಿಲ್ಲೆಯ 6 ತಂಡಗಳು ಭಾಗವಹಿಸಲಿವೆ.
ಈ ಬಗ್ಗೆ ಸಂಘಟನಾ ಸಮಿತಿ ರಚಿಸಲಾಗಿದೆ. ದ.ಕ.ಜಿಲ್ಲಾ ಅಸೋಸಿಯೇಶನ್ ನ ಉಪಾಧ್ಯಕ್ಷ ಎನ್.ಎ.ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ರಚಿಸಲಾಯಿತು. ಜಿಲ್ಲಾ ಅಸೋಸಿಯೇಶನ್ ನ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ಸ್ವಾಗತಿಸಿ, ಉಪಾಧ್ಯಕ್ಷ ಬಿ.ಕೆ.ಮಾಧವ ವಂದಿಸಿದರು. ಕೋಶಾಧಿಕಾರಿ ಸಂತೋಷ್ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು.
ಸಂಘಟನಾ ಸಮತಿ:
ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಎಸ್.ಗಂಗಾಧರ, ಸಂಯೋಜಕರಾಗಿ ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿಯಾಗಿ ನವೀನ್ ಕಜೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…