ಸುಳ್ಯದಲ್ಲಿ ಲಂಚಾವತಾರ: ಭ್ರಷ್ಟಾಚಾರ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲು ಆಮ್ ಆದ್ಮಿ ಪಕ್ಷ ಒತ್ತಾಯ

June 8, 2019
2:35 PM

ಸುಳ್ಯ: ಭ್ರಷ್ಟಾಚಾರ ಸುಳ್ಯದ ಬಹುತೇಕ ಇಲಾಖೆಗಳಲ್ಲಿ ತಾಂಡವವಾಡುತ್ತಿದೆ ಎಂಬ ವಿಚಾರ ಜನಸಾಮಾನ್ಯರಿಗೆ ನಿತ್ಯಜೀವನದಲ್ಲಿ ಅನುಭವಕ್ಕೆ ಬರುತ್ತಿದೆಯಾದರೂ ಬಹುತೇಕ ಜನತೆಗೆ ಆಡಳಿತ ವ್ಯವಸ್ಥೆ ಶುದ್ದೀಕರಣ ಯಾವ ರೀತಿ ಮಾಡಬೇಕೆಂದೆ ತಿಳಿಯದಾಗಿದೆ. ಆಯ್ಕೆಯಾದ ಜನಪ್ರತಿನಿಧಿ ಭ್ರಷ್ಟಾಚಾರ ಮಾಡದೇ ಇದ್ದರೆ ಸಾಲದು, ಭ್ರಷ್ಟಾಚಾರ ವಿರುದ್ದ ಧ್ವನಿ ಎತ್ತಬೇಕಿದೆ. ಸುಳ್ಯದಲ್ಲಿ ಈಗ ಕಂಡುಬಂದ ಭ್ರಷ್ಟಾಚಾರ ವಿರುದ್ಧ ಸೂಕ್ತ ಕ್ರಮವಾಗಬೇಕು. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.

Advertisement
Advertisement

 

ಇಂದು ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆತುತ್ತಿರುವು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಗಿದ್ದು ಮಲೆನಾಡಿನ 17 ತಾಲೂಕಿನ ದೊಡ್ಡ ಮಟ್ಟಿನ ಕೃಷಿ ಭೂಮಿ ಪರಬಾರೆ ಇತ್ಯಾದಿ ಕೃಷಿಯೇತರರಿಗೆ ನಕಲಿ ದಾಖಲೆಗಳ ಮೂಲಕ ನಡೆಯುತ್ತಿದ್ದು ಕಳೆದ 15 ವರ್ಷಗಳ ಪರಬಾರೆ ದಾಖಲೆಗಳನ್ನು ತನಿಖೆ ಒಳಪಡಿಸಬೇಕು, ಪರಿಸರ ಹಾಗೂ ಕೃಷಿ ನಾಶ ತಡೆಯಬೇಕು ಎಂಬುದಾಗಿ ಕಂದಾಯ ಸಚಿವರನ್ನು ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ ಎಂದು ಎಎಪಿ ಮುಖಂಡ ಅಶೋಕ್ ಎಮಡಲೆ ತಿಳಿಸಿದ್ದಾರೆ.

 

ಇದೀಗ ಸುಳ್ಯದ ಸಬ್ ರಿಜಿಸ್ಟ್ರಾರ್ ಭ್ರಷ್ಟಾಚಾರ ಬಗ್ಗೆ ಜನಸಾಮಾನ್ಯರು ನೊಂದು ವೀಡಿಯೋ ವರದಿ ಮಾಡುವ ಮೂಲಕ ತಮ್ಮ ಕೊನೆಯ ಆಕ್ರೋಶದ ಅಸ್ತ್ರ ಪ್ರಯೋಗ ಮಾಡಿದ್ದಾರೆ ‌ಇದರ ಬಗ್ಗೆಯೂ ಕೂಲಕುಂಶ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿ ಪಡಿಸಬೇಕು, ಮಾತ್ರವಲ್ಲ ಭ್ರಷ್ಟಾಚಾರ ತಡೆಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಅವರನ್ನು ಆಮ್ ಆದ್ಮಿ ಪಾರ್ಟಿ ಆಗ್ರಹಿಸುತ್ತದೆ.

ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷದ ಬಿಜೆಪಿ ಕಾರ್ಯಕರ್ತರೇ ಮದ್ಯವರ್ತಿಗಳಾಗಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಇಲ್ಲದಾಗಿದೆ. ಸುಳ್ಯದಲ್ಲಿ ಭ್ರಷ್ಟಾಚಾರ ವಿರುದ್ದ ಬಿಜೆಪಿಯನ್ನು ಜನತೆ ಕಳೆದ 25 ವರ್ಷದಿಂದ ಎಲ್ಲಾ ಸ್ತರದಲ್ಲಿ ಆಯ್ಕೆ ಮಾಡಿದ್ದರೂ , ಬಿಜೆಪಿಯೂ ಒಂದು ವಿಶಿಷ್ಟ ಧಾರ್ಮಿಕ ಸಿದ್ದಾಂತದ ವಿಚಾರಕ್ಕೆ ಸೀಮಿತವಾದ ಪಕ್ಷವಾಗಿ, ಆಡಳಿತದಲ್ಲಿ ನಡೆಯುವ,  ಯಾವುದೇ ಭ್ರಷ್ಟಾಚಾರ ವಿಷಯದಲ್ಲಿ ಈ ತನಕ‌ ಹೋರಾಟವಾಗಲಿ , ತನಿಖೆಗೆ ದೂರು ನೀಡಿದ ಕುರುಹು ಕಂಡು ಬರುವುದಿಲ್ಲ. ರಾಜ್ಯ ಆಡಳಿತ ಕಾಂಗ್ರೆಸ್ ಸ್ಥಳೀಯವಾಗಿ ನಿಷ್ಕ್ರಿಯವಾಗಿ ಕೇವಲ ಬ್ರೋಕರ್ ಕೆಲಸದಲ್ಲಿ ನಿರತವಾಗಿದೆ  ಎಂದು ಆರೋಪಿಸಿದೆ.

ಜನಸಾಮಾನ್ಯರು, ರೈತರು ಶ್ರಮಿಕರು ಭ್ರಷ್ಟಾಚಾರ ವಿರುದ್ದ ಒಂದಾಗಿ ವಿರೋಧಿಸಬೇಕು ಭ್ರಷ್ಟಾಚಾರ ವಿರೋಧಿ ಆಮ್ ಆದ್ಮಿ ಪಾರ್ಟಿ ಆಂದೋಲನದಲ್ಲಿ ಕೈಜೋಡಿಸಬೇಕೆಂದು ಎಂದು ಆಮ್ ಆದ್ಮಿ ಮನವಿ ಮಾಡಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror