ಸುಳ್ಯ: ಸುಳ್ಯ ತಾಲೂಕು ನಾಡಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆ ನಡೆಯಿತು.
ಸಮಾರಂಭವನ್ನು ಉದ್ಘಾಟಿಸಿದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹ್ಮದ್ ಮಾತನಾಡಿ ಶ್ರೀರಾಮ ಆದರ್ಶತೆಗೆ ಮತ್ತೊಂದು ಹೆಸರು. ಮಹರ್ಷಿ ವಾಲ್ಮೀಕಿ ಮತ್ತು ಅವರು ಮಾಡಿದ ಕಾರ್ಯ ಶ್ರೀರಾಮನ ಕೀರ್ತಿಯಷ್ಟೆ ಅಜರಾಮರವಾದದ್ದು. ಸಮುದಾಯವನ್ನು ಮೀರಿದ ಸಾಧಕ ವಾಲ್ಮೀಕಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ಮಾತನಾಡಿ, ವಾಲ್ಮೀಕಿಯಂತಹ ಮಹನೀಯರ ಸಾಧನೆ ಮತ್ತು ರಾಮಾಯಣದ ಮೂಲಕ ಅವರು ಕೊಟ್ಟ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಆಗಬೇಕು ಎಂದು ಹೇಳಿದರು. ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ ವಾಲ್ಮೀಕಿ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಎ.ಎಸ್.ಲಕ್ಷ್ಮೀದೇವಿ ಉಪಸ್ಥಿತರಿದ್ದರು. ವಾರ್ಡನ್ ಕೃಷ್ಣಪ್ಪ ಗೌಡ ಸ್ವಾಗತಿಸಿ, ಶಿಕ್ಷಕಿ ಕವಿತಾ ವಂದಿಸಿದರು. ಅರ್ಶಿಯಾ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…