ಸುಳ್ಯ: ಸುಳ್ಯ ತಾಲೂಕು ನಾಡಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಭವನದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಜಯಂತಿ ಆಚರಣೆ ನಡೆಯಿತು.
ಸಮಾರಂಭವನ್ನು ಉದ್ಘಾಟಿಸಿದ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹ್ಮದ್ ಮಾತನಾಡಿ ಶ್ರೀರಾಮ ಆದರ್ಶತೆಗೆ ಮತ್ತೊಂದು ಹೆಸರು. ಮಹರ್ಷಿ ವಾಲ್ಮೀಕಿ ಮತ್ತು ಅವರು ಮಾಡಿದ ಕಾರ್ಯ ಶ್ರೀರಾಮನ ಕೀರ್ತಿಯಷ್ಟೆ ಅಜರಾಮರವಾದದ್ದು. ಸಮುದಾಯವನ್ನು ಮೀರಿದ ಸಾಧಕ ವಾಲ್ಮೀಕಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ ಮಾತನಾಡಿ, ವಾಲ್ಮೀಕಿಯಂತಹ ಮಹನೀಯರ ಸಾಧನೆ ಮತ್ತು ರಾಮಾಯಣದ ಮೂಲಕ ಅವರು ಕೊಟ್ಟ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸುವ ಪ್ರಯತ್ನ ಆಗಬೇಕು ಎಂದು ಹೇಳಿದರು. ಪತ್ರಕರ್ತ ದುರ್ಗಾಕುಮಾರ್ ನಾಯರ್ಕೆರೆ ವಾಲ್ಮೀಕಿ ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಎ.ಎಸ್.ಲಕ್ಷ್ಮೀದೇವಿ ಉಪಸ್ಥಿತರಿದ್ದರು. ವಾರ್ಡನ್ ಕೃಷ್ಣಪ್ಪ ಗೌಡ ಸ್ವಾಗತಿಸಿ, ಶಿಕ್ಷಕಿ ಕವಿತಾ ವಂದಿಸಿದರು. ಅರ್ಶಿಯಾ ಕಾರ್ಯಕ್ರಮ ನಿರೂಪಿಸಿದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…