ಸುಳ್ಯ: ಎಸ್ ಕೆಎಸ್ ಎಸ್ ಎಫ್ ವಿಖಾಯ ಸಮಿತಿಯ ವತಿಯಿಂದ ವಿಖಾಯ ಕಾರ್ಯಕರ್ತರ ಸ್ನೇಹಸಮ್ಮಿಲನ ಹಾಗೂ ನೂತನ ಶಾಖಾ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭವು ಸುಳ್ಯ ಸುಪ್ರೀಂ ಕಾಂಪೌಂಡ್ ನಲ್ಲಿ ಜನವರಿ 17 ರಂದು ನಡೆಯಿತು.
ಐವರ್ನಾಡು ಮಸೀದಿಯ ಖತೀಬ್ ಉಸ್ತಾದ್, ಅಬ್ದುಲ್ ಲತೀಫ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯ ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ ಸಮಸ್ಥದ ಕಾರ್ಯವೈಖರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ತರಭೇತಿ ನೀಡಿದರು. ವಿಖಾಯ ಕಾರ್ಯಕರ್ತರ ಹೊಣೆಗಾರಿಕೆ ಹಾಗೂ ಮಾಡಬೇಕಾದ ಕೆಲಸಕಾರ್ಯಗಳ ಬಗ್ಗೆ ಅಜ್ಜಾವರ ಖತೀಬ್ ಉಸ್ತಾದ್, ಉಮ್ಮರ್ ಫೈಝಿ ನೆಲ್ಯಾಡಿ
ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ,ಎಸ್ ವೈ ಎಸ್ ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ರಝಾಕ್ ಉಸ್ತಾದ್ ಅಜ್ಜಾವರ, ಶಾಫಿ ಮುಕ್ರಿ,ಫಾರೂಕ್ ಅಡ್ಕ, ಕಳಂದರ್ ಎಲಿಮಲೆ,ಷರೀಫ್ ಅಜ್ಜಾವರ, ತಾಜುದ್ದೀನ್ ಅರಂತೋಡು ಹಾಗೂ ಸುಮಾರು ನೂರೈವತ್ತು ಜನ ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು. ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…