ಸುಳ್ಯ: ಎಸ್ ಕೆಎಸ್ ಎಸ್ ಎಫ್ ವಿಖಾಯ ಸಮಿತಿಯ ವತಿಯಿಂದ ವಿಖಾಯ ಕಾರ್ಯಕರ್ತರ ಸ್ನೇಹಸಮ್ಮಿಲನ ಹಾಗೂ ನೂತನ ಶಾಖಾ ಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭವು ಸುಳ್ಯ ಸುಪ್ರೀಂ ಕಾಂಪೌಂಡ್ ನಲ್ಲಿ ಜನವರಿ 17 ರಂದು ನಡೆಯಿತು.
ಐವರ್ನಾಡು ಮಸೀದಿಯ ಖತೀಬ್ ಉಸ್ತಾದ್, ಅಬ್ದುಲ್ ಲತೀಫ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಸುಳ್ಯ ವಲಯ ಎಸ್ ಕೆಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ ಸಮಸ್ಥದ ಕಾರ್ಯವೈಖರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಕಾರ್ಯಕರ್ತರಿಗೆ ತರಭೇತಿ ನೀಡಿದರು. ವಿಖಾಯ ಕಾರ್ಯಕರ್ತರ ಹೊಣೆಗಾರಿಕೆ ಹಾಗೂ ಮಾಡಬೇಕಾದ ಕೆಲಸಕಾರ್ಯಗಳ ಬಗ್ಗೆ ಅಜ್ಜಾವರ ಖತೀಬ್ ಉಸ್ತಾದ್, ಉಮ್ಮರ್ ಫೈಝಿ ನೆಲ್ಯಾಡಿ
ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ,ಎಸ್ ವೈ ಎಸ್ ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ರಝಾಕ್ ಉಸ್ತಾದ್ ಅಜ್ಜಾವರ, ಶಾಫಿ ಮುಕ್ರಿ,ಫಾರೂಕ್ ಅಡ್ಕ, ಕಳಂದರ್ ಎಲಿಮಲೆ,ಷರೀಫ್ ಅಜ್ಜಾವರ, ತಾಜುದ್ದೀನ್ ಅರಂತೋಡು ಹಾಗೂ ಸುಮಾರು ನೂರೈವತ್ತು ಜನ ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು. ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…