Advertisement
ನಮ್ಮೂರ ಸುದ್ದಿ

ಸುಳ್ಯದಲ್ಲಿ ವಿಶ್ವ ಪರಿಸರ ದಿನಾಚರಣೆ

Share

ಸುಳ್ಯ: ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಸುಳ್ಯದ ಸಿವಿಲ್ ನ್ಯಾಯಾಧೀಶ ಯಶ್ವಂತ ಕುಮಾರ್ ಕೆ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಸ.ಪ.ಪೂ.ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ.ಕಾಲೇಜು ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್, ವಿನಾಶಕ್ಕೆ ಪ್ರಕೃತಿಯನ್ನು ಬಳಸಬೇಡಿ. ಅದರಿಂದ ಮಾನವನ ಆವಾಸಕ್ಕೆ ಮಾರಕ ಎಂದ ಅವರ ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಕೂಡ ಪ್ರಕೃತಿ ವಿಕೋಪದಂತಹ ಘಟನೆಗೆ ಹೇತು ಎಂದು ಅವರು ವಿವರಿಸಿದರು.
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವ ಜಾಗೃತಿ ಇಲ್ಲದಿರುವುದೇ ನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.
ಸುಳ್ಯ.ಸಪ.ಪೂ.ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರು ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮಥ್ರ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತುಕೊಡಬೇಕು ಎಂದರು.
ವೇದಿಕೆಯಲ್ಲಿ ಸುಳ್ಯ ಸಬ್ ಇನ್ಸ್‍ಪೆಕ್ಟರ್ ಹರೀಶ್ ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ವಕೀಲ ಹರೀಶ್ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

7 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

14 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago