Advertisement
ನಮ್ಮೂರ ಸುದ್ದಿ

ಸುಳ್ಯದಲ್ಲಿ ವಿಶ್ವ ಪರಿಸರ ದಿನಾಚರಣೆ

Share

ಸುಳ್ಯ: ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಸುಳ್ಯದ ಸಿವಿಲ್ ನ್ಯಾಯಾಧೀಶ ಯಶ್ವಂತ ಕುಮಾರ್ ಕೆ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಸ.ಪ.ಪೂ.ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ.ಕಾಲೇಜು ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್, ವಿನಾಶಕ್ಕೆ ಪ್ರಕೃತಿಯನ್ನು ಬಳಸಬೇಡಿ. ಅದರಿಂದ ಮಾನವನ ಆವಾಸಕ್ಕೆ ಮಾರಕ ಎಂದ ಅವರ ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಕೂಡ ಪ್ರಕೃತಿ ವಿಕೋಪದಂತಹ ಘಟನೆಗೆ ಹೇತು ಎಂದು ಅವರು ವಿವರಿಸಿದರು.
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವ ಜಾಗೃತಿ ಇಲ್ಲದಿರುವುದೇ ನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.
ಸುಳ್ಯ.ಸಪ.ಪೂ.ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರು ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮಥ್ರ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತುಕೊಡಬೇಕು ಎಂದರು.
ವೇದಿಕೆಯಲ್ಲಿ ಸುಳ್ಯ ಸಬ್ ಇನ್ಸ್‍ಪೆಕ್ಟರ್ ಹರೀಶ್ ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ವಕೀಲ ಹರೀಶ್ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

13 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

17 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

18 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

20 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

21 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

22 hours ago