Advertisement
ನಮ್ಮೂರ ಸುದ್ದಿ

ಸುಳ್ಯದಲ್ಲಿ ವಿಶ್ವ ಪರಿಸರ ದಿನಾಚರಣೆ

Share

ಸುಳ್ಯ: ಪರಿಸರದ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ದಿನಾಚರಣೆ ಪೂರಕವಾಗಬೇಕು. ಗಿಡ ನೆಟ್ಟು ಅದನ್ನು ಉಳಿಸುವಲ್ಲಿ ಯುವ ಸಮುದಾಯ ಆಸಕ್ತಿ ಹೊಂದಬೇಕು ಎಂದು ಸುಳ್ಯದ ಸಿವಿಲ್ ನ್ಯಾಯಾಧೀಶ ಯಶ್ವಂತ ಕುಮಾರ್ ಕೆ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಸ.ಪ.ಪೂ.ಕಾಲೇಜು ಇದರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸುಳ್ಯ ಸ.ಪ.ಪೂ.ಕಾಲೇಜು ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ದಳ ಸುಬ್ರಾಯ ಭಟ್, ವಿನಾಶಕ್ಕೆ ಪ್ರಕೃತಿಯನ್ನು ಬಳಸಬೇಡಿ. ಅದರಿಂದ ಮಾನವನ ಆವಾಸಕ್ಕೆ ಮಾರಕ ಎಂದ ಅವರ ಅಕ್ರಮ ಗಣಿಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ಕೂಡ ಪ್ರಕೃತಿ ವಿಕೋಪದಂತಹ ಘಟನೆಗೆ ಹೇತು ಎಂದು ಅವರು ವಿವರಿಸಿದರು.
ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್ ಮಾತನಾಡಿ, ಒಂದು ಗಿಡ ಮರವಾಗಿ ಬೆಳೆಯಲು 60 ವರ್ಷ ಬೇಕು. ಅದನ್ನು ಕಡಿಯಲು 5 ನಿಮಿಷ ಸಾಕು. ಹೀಗಾಗಿ ಕಡಿಯುವ ಮನಸ್ಥಿತಿ ಬದಲಾಯಿಸಿ ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು. ಸ್ವ ಜಾಗೃತಿ ಇಲ್ಲದಿರುವುದೇ ನಾಶಕ್ಕೆ ಮುಖ್ಯ ಕಾರಣ ಎಂದು ವಿಶ್ಲೇಷಿಸಿದರು.
ಸುಳ್ಯ.ಸಪ.ಪೂ.ಕಾಲೇಜು ಪ್ರಾಂಶುಪಾಲ ಮೋಹನ ಗೌಡ ಬಿ.ಕೆ. ಮಾತನಾಡಿ, ನೆಲ, ಜಲ, ಗಾಳಿ ಮಾಲಿನ್ಯ ಆಗದಂತೆ ಪ್ರತಿಯೊಬ್ಬರು ಜಾಗೃತರಾಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಉಪಾಧ್ಯಕ್ಷ ಶ್ರೀಹರಿ ಕುಕ್ಕುಡೇಲು ಮಾತನಾಡಿ, ವಿದ್ಯಾರ್ಥಿ ಶಕ್ತಿಗೆ ಪರಿಸರ ಸಂರಕ್ಷಿಸುವ ಸಾಮಥ್ರ್ಯ ಇದೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತುಕೊಡಬೇಕು ಎಂದರು.
ವೇದಿಕೆಯಲ್ಲಿ ಸುಳ್ಯ ಸಬ್ ಇನ್ಸ್‍ಪೆಕ್ಟರ್ ಹರೀಶ್ ಕುಮಾರ್, ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಧಿಕಾರಿ ಪ್ರೀತಿ ನಾಯ್ಕ ಉಪಸ್ಥಿತರಿದ್ದರು. ವಕೀಲ ಹರೀಶ್ ಬೂಡುಪನ್ನೆ ಸ್ವಾಗತಿಸಿ, ನಾಗೇಶ ವಂದಿಸಿದರು. ದಿನೇಶ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

43 minutes ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

7 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

13 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago