ಕಾರ್ಯಕ್ರಮಗಳು

ಸುಳ್ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.

Advertisement
Advertisement

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ  ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರ‌ಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

6 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

6 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

13 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

14 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

14 hours ago