ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.
ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…