Advertisement
ಕಾರ್ಯಕ್ರಮಗಳು

ಸುಳ್ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

Share

ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ  ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರ‌ಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

28 minutes ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

3 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

11 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago