Advertisement
ಕಾರ್ಯಕ್ರಮಗಳು

ಸುಳ್ಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

Share

ಸುಳ್ಯ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ, ಸುಳ್ಯ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘ, ಎಂ.ಬಿ.ಫೌಂಡೇಶನ್ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಡಿ.7 ರಂದು ಸುಳ್ಯ ಕೆ.ವಿ.ಜಿ. ಪುರಭವನದಲ್ಲಿ ನಡೆಯಿತು.

ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ಗಂಗಾಧರ ರೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಪುರುಷೋತ್ತಮ ಕೆ.ಜಿ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ ಅತಿಥಿಗಳಾಗಿ ಭಾಗವಹಿಸಿದ್ದರು. ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಕಾರ್ಯದರ್ಶಿ ಪ್ರವೀಣ್ ನಾಯಕ್, ತಾ.ಪಂ.ತಾಲೂಕು ವಿವಿಧೋದ್ದೇಶ ಕಾರ್ಯಕರ್ತ ಚಂದ್ರಶೇಖರ್.ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಸಂಘದ ಅಧ್ಯಕ್ಷ ಪುಟ್ಟಣ್ಣ ವಲಿಕಜೆ ಸ್ವಾಗತಿಸಿ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ.ಸದಾಶಿವ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಶ್ವರಿ ಪ್ರಾರ್ಥಿಸಿದರು. ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ  ಸರಕಾರ ನೀಡಿದ ತ್ರಿಚಕ್ರ ವಾಹನ ಸವಾರರಿಂದ ನಗರದಲ್ಲಿ ಮೆರವಣಿಗೆ ನಡೆಯಿತು. ಜ್ಯೋತಿ ವೃತ್ತದಿಂದ ಪುರಭವನದವರೆಗೆ ನಡೆದ ಮೆರವಣಿಗೆಗೆ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ ಚಾಲನೆ ನೀಡಿದರು. ಕಾರ್ಯಕ್ರ‌ಮದ ಅಂಗವಾಗಿ ವಿಶಿಷ್ಟ ಸಾಧಕ ವಿಕಲಚೇತನರಿಗೆ ಸನ್ಮಾನ, ಮಾಹಿತಿ ಕಾರ್ಯಾಗಾರ, ನೂತನ ಗುರುತು ಚೀಟಿ ನೀಡುವ ಕಾರ್ಯಕ್ರಮ, ವಿಶೇಷ ಮಕ್ಕಳ ಮನರಂಜನೆಗಾಗಿ ತಿರುಗುವ ಕುದುರೆ, ಜಂಪಿಂಗ್ ಬಾಲ್ ಮುಂತಾದ ವಿಶಿಷ್ಟ ಮನೋಲ್ಲಾಸ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

4 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

10 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

11 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

11 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

11 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

11 hours ago