ಸುಳ್ಯ: ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಶಂಕರ ಜಯಂತಿ ಆಚರಣೆ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಶಂಕರಾಚಾರ್ಯ ಕಲ್ಪೋಕ್ತ ಪೂಜೆ ಮತ್ತು ಶಂಕರಾಚಾರ್ಯ ಅಸ್ಟೋತ್ತರ ಶತನಾಮಾವಳಿ ಪಠಣ ನಡೆಯಿತು. ಬಳಿಕ ಮಕ್ಕಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಮಹಿಳೆ ಮತ್ತು ಪುರುಷರಿಗೆ ಸೌಂದರ್ಯ ಲಹರಿ ಶ್ಲೋಕ ಸ್ಪರ್ಧೆ ನಡೆಯಿತು.
ಸ್ಥಾನಿಕ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಗಿರಿಜಾಶಂಕರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಸೇವಾ ಸಂಘಟನೆಗಳು ಸಮಾಜದ ಒಳಿತಿಗಾಗಿ ಶ್ರಮಿಸುತ್ತಾ ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಗಿರಿಜಾ ಶಂಕರ ಹೇಳಿದರು.
ಕಾರ್ಯದರ್ಶಿ ಕೆ.ಆರ್.ಕೃಷ್ಣ ರಾವ್ ವರದಿ ವಾಚಿಸಿದರು. ಕೋಶಾಧಿಕಾರಿ ಶ್ರೀಧರ ರಾವ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಕುಮಾರಸ್ವಾಮಿ ರೆಂಜಾಳ ಮತ್ತು ಅರುಣ್ ಕುಮಾರ್ ಎನ್, ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಶ್ರೀಧರ ರಾವ್ ಸಹಕರಿಸಿದರು. ಸಮಾಜದ ಹಿರಿಯ ದಂಪತಿ ವಿಷ್ಣಯ್ಯ ಬೇರಿಕೆ ಮತ್ತು ಮಹಾಲಕ್ಷಿ ಅವರನ್ನು ಸಂಘದ ಪೂರ್ವಾಧ್ಯಕ್ಷರಾದ ಬಯಂಬು ಭಾಸ್ಕರ ರಾವ್, ಎ.ಭಾಸ್ಕರ ರಾವ್ ಮತ್ತು ಡಾ.ಸದಾಶಿವ ರಾವ್ ಸನ್ಮಾನಿಸಿದರು.
ಆಟೋಟ ಸ್ಪರ್ಧೆ, ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…