ಸುಳ್ಯ: ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಶಂಕರ ಜಯಂತಿ ಆಚರಣೆ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಶಂಕರಾಚಾರ್ಯ ಕಲ್ಪೋಕ್ತ ಪೂಜೆ ಮತ್ತು ಶಂಕರಾಚಾರ್ಯ ಅಸ್ಟೋತ್ತರ ಶತನಾಮಾವಳಿ ಪಠಣ ನಡೆಯಿತು. ಬಳಿಕ ಮಕ್ಕಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಮಹಿಳೆ ಮತ್ತು ಪುರುಷರಿಗೆ ಸೌಂದರ್ಯ ಲಹರಿ ಶ್ಲೋಕ ಸ್ಪರ್ಧೆ ನಡೆಯಿತು.
ಸ್ಥಾನಿಕ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಗಿರಿಜಾಶಂಕರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಸೇವಾ ಸಂಘಟನೆಗಳು ಸಮಾಜದ ಒಳಿತಿಗಾಗಿ ಶ್ರಮಿಸುತ್ತಾ ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಗಿರಿಜಾ ಶಂಕರ ಹೇಳಿದರು.
ಕಾರ್ಯದರ್ಶಿ ಕೆ.ಆರ್.ಕೃಷ್ಣ ರಾವ್ ವರದಿ ವಾಚಿಸಿದರು. ಕೋಶಾಧಿಕಾರಿ ಶ್ರೀಧರ ರಾವ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಕುಮಾರಸ್ವಾಮಿ ರೆಂಜಾಳ ಮತ್ತು ಅರುಣ್ ಕುಮಾರ್ ಎನ್, ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಶ್ರೀಧರ ರಾವ್ ಸಹಕರಿಸಿದರು. ಸಮಾಜದ ಹಿರಿಯ ದಂಪತಿ ವಿಷ್ಣಯ್ಯ ಬೇರಿಕೆ ಮತ್ತು ಮಹಾಲಕ್ಷಿ ಅವರನ್ನು ಸಂಘದ ಪೂರ್ವಾಧ್ಯಕ್ಷರಾದ ಬಯಂಬು ಭಾಸ್ಕರ ರಾವ್, ಎ.ಭಾಸ್ಕರ ರಾವ್ ಮತ್ತು ಡಾ.ಸದಾಶಿವ ರಾವ್ ಸನ್ಮಾನಿಸಿದರು.
ಆಟೋಟ ಸ್ಪರ್ಧೆ, ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…