ಸುಳ್ಯ: ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಶಂಕರ ಜಯಂತಿ ಆಚರಣೆ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಶ್ರೀ ಶಂಕರಾಚಾರ್ಯ ಕಲ್ಪೋಕ್ತ ಪೂಜೆ ಮತ್ತು ಶಂಕರಾಚಾರ್ಯ ಅಸ್ಟೋತ್ತರ ಶತನಾಮಾವಳಿ ಪಠಣ ನಡೆಯಿತು. ಬಳಿಕ ಮಕ್ಕಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆ ಮಹಿಳೆ ಮತ್ತು ಪುರುಷರಿಗೆ ಸೌಂದರ್ಯ ಲಹರಿ ಶ್ಲೋಕ ಸ್ಪರ್ಧೆ ನಡೆಯಿತು.
ಸ್ಥಾನಿಕ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಗಿರಿಜಾಶಂಕರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಸೇವಾ ಸಂಘಟನೆಗಳು ಸಮಾಜದ ಒಳಿತಿಗಾಗಿ ಶ್ರಮಿಸುತ್ತಾ ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಗಿರಿಜಾ ಶಂಕರ ಹೇಳಿದರು.
ಕಾರ್ಯದರ್ಶಿ ಕೆ.ಆರ್.ಕೃಷ್ಣ ರಾವ್ ವರದಿ ವಾಚಿಸಿದರು. ಕೋಶಾಧಿಕಾರಿ ಶ್ರೀಧರ ರಾವ್ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷ ಕುಮಾರಸ್ವಾಮಿ ರೆಂಜಾಳ ಮತ್ತು ಅರುಣ್ ಕುಮಾರ್ ಎನ್, ಮಹಿಳಾ ಘಟಕದ ಅಧ್ಯಕ್ಷೆ ರಾಜೇಶ್ವರಿ ಶ್ರೀಧರ ರಾವ್ ಸಹಕರಿಸಿದರು. ಸಮಾಜದ ಹಿರಿಯ ದಂಪತಿ ವಿಷ್ಣಯ್ಯ ಬೇರಿಕೆ ಮತ್ತು ಮಹಾಲಕ್ಷಿ ಅವರನ್ನು ಸಂಘದ ಪೂರ್ವಾಧ್ಯಕ್ಷರಾದ ಬಯಂಬು ಭಾಸ್ಕರ ರಾವ್, ಎ.ಭಾಸ್ಕರ ರಾವ್ ಮತ್ತು ಡಾ.ಸದಾಶಿವ ರಾವ್ ಸನ್ಮಾನಿಸಿದರು.
ಆಟೋಟ ಸ್ಪರ್ಧೆ, ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಗರಿಷ್ಟ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…