Advertisement
MIRROR FOCUS

ಸುಳ್ಯದಲ್ಲಿ ಶುರುವಾಗಿದೆ “ಸಂಚಾರಿ ಯೋಗ “, ಮನೆಮನೆಗೂ ಬರಲಿದ್ದಾರೆ ಯೋಗ ಗುರುಗಳು….!

Share

ಸುಳ್ಯ: ಸುಳ್ಯದಲ್ಲಿ  ಇದೀಗ “ಸಂಚಾರಿ ಯೋಗ” ಎಂಬ ವಿಶೇಷ ಅಭಿಯಾನ ಶುರುವಾಗಿದೆ. ಪ್ರತೀ ಗ್ರಾಮ, ಹಳ್ಳಿ, ವಾರ್ಡ್ ಗಳಿಗೆ ಯೋಗ ಗುರುಗಳು ಆಗಮಿಸಿ ಯೋಗದ ಬಗ್ಗೆ ತರಬೇತಿ ನೀಡಿಲಿದ್ದಾರೆ. ಇದರ ಆರಂಭ ಉಬರಡ್ಕದಲ್ಲಿ  ನಡೆದಿದೆ. 15 ದಿನಗಳ ಕಾಲ ಇಲ್ಲಿ ಯೋಗ ಶಿಬಿರ ನಡೆಯಲಿದೆ. ಈ ಶಿಬಿರ  ಯೋಗಗುರು ಸಂತೋಷ್ ಮುಂಡಕಜೆ ನೇತೃತ್ವದಲ್ಲಿ ನಡೆಯುತ್ತಿದೆ.

Advertisement
Advertisement

ಯೋಗವೆಂಬುದು ಈಗ ಎಲ್ಲರ ಸೊತ್ತು. ಹಿಂದೆಲ್ಲಾ ಯೋಗ ಎಂದರೇನು ಎಂಬುದನ್ನು ಸಾಕಷ್ಟು ಬಾರಿ ವಿವರವಾಗಿ ಹೇಳಿದರೂ ಯೋಗದ ಬಗ್ಗೆ ಅನಾದಾರ ಇತ್ತು. ಭಾರತೀಯ ಪರಂಪರೆ ಇದಕ್ಕಿದ್ದರೂ ಯೋಗದ ಮಹತ್ವ ತಿಳಿದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೂಲಕ ಯಾವಾಗ ಯೋಗವು ವಿಶ್ವದ ಮಟ್ಟಕ್ಕೆ ತಲಪಿತೋ ಅಂದಿನಿಂದಲೇ ಯೋಗವು ಎಲ್ಲರ ಸೊತ್ತಾಯಿತು. ಪ್ರತಿಯೊಬ್ಬರೂ ಯೋಗ ಮಾಡುವುದಕ್ಕೆ ಆರಂಭ ಮಾಡಿದರು. ಹೀಗಾಗಿ ವಿಶ್ವಯೋಗದಿನ ಮಾತ್ರವಲ್ಲ ಯೋಗ ಕೇಂದ್ರಗಳು ತೆರೆದವು, ಪ್ರತೀ ಹಳ್ಳಿಗೂ ಯೋಗದ ಬಗ್ಗೆ ಅರಿವು ಮೂಡಿತು.

 

 

ವಿಶ್ವ  ಯೋಗದ ಕಲ್ಪನೆ ಹೀಗಿತ್ತು,  ಭಾರತೀಯ ಪರಂಪರೆಯಲ್ಲಿ  ಯೋಗಕ್ಕೆ ಮಹತ್ವದ ಸ್ಥಾನವಿತ್ತು. ಋಷಿಮುನಿಗಳು ಯೋಗದ ಮೂಲಕವೇ ದೇಹವನ್ನು, ಮನಸ್ಸನ್ನು ನಿಯಂತ್ರಣ ಮಾಡುತ್ತಿದ್ದರು. ರೋಗ ಮುಕ್ತ ಬದುಕು ಸಾಗಿಸುತ್ತಿದ್ದರು. ಆದರೆ ಕಾಲಕ್ರಮೇಣ ಯೋಗ ಮರೆಯಾಯಿತು. ದೇಶದಲ್ಲಿ  ರೋಗಿಗಳ ಸಂಖ್ಯೆ ಹೆಚ್ಚಾಗತೊಡಗಿತು. ಇದಕ್ಕೆ ಆಹಾರ, ವಿಹಾರ, ಮನಸ್ಸೂ ಕಾರಣವಾಯಿತು. ಸಮೀಕ್ಷೆಯೊಂದರ ಪ್ರಕಾರ ಈ ದೇಶದಲ್ಲಿ ಶೇ.30 ರಷ್ಟು ಯುವಕರ ಸಹಿತ 50 ವರ್ಷದ ಕೆಳಗಿನ ಮಂದಿ ವಿವಿಧ ಗಂಭೀರವಲ್ಲದ  ಕಾಯಿಲೆಯಿಂದ ಬಳಲುತ್ತಿದ್ದರು. ವರ್ಷದಿಂದ ವರ್ಷಕ್ಕೆ ಇದರ ಪ್ರಮಾಣ ಹೆಚ್ಚುತ್ತಲೇ ಹೋಗುತ್ತಿದೆ. ಹೀಗಾದರೆ ದೇಶದ ಮಾನವ ಸಂಪನ್ಮೂಲದ ಸದ್ಭಳಕೆ ಕಷ್ಟವಾಗುತ್ತಿದೆ. ಇದೇ ರೀತಿಯಲ್ಲಿ ಸಾಗಿದರೆ ಮುಂದಿನ 25 ವರ್ಷಗಳಲ್ಲಿ  ಯುವಕರೇ ರೋಗದಿಂದ ಬಳಲುತ್ತಾರೆ,. ಹೀಗಾದರೆ ಮಾನವ ಸಂಪನ್ಮೂಲದ ಕೊರತೆ ಹೆಚ್ಚುತ್ತದೆ. ಹೀಗಾಗಿ ಇಂತಹ ರೋಗಗಳ ನಿವಾರಣೆ ಹಾಗೂ ಗಂಭೀರವಲ್ಲದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಯೋಗ. ಇದರ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಯೋಗವನ್ನು ವಿಶ್ವಮಟ್ಟಕ್ಕೆ ವಿಸ್ತರಿಸಿದರು. ಇದು ಭಾರತದಲ್ಲೂ ಮತ್ತೆ ಯೋಗ ಜೀವಪಡೆಯುವುದಕ್ಕೆ ಸಾಧ್ಯವಾಯಿತು. ಹೀಗಾಗಿ ಈಗ ಭಾರತದ ಹಳ್ಳಿ ಹಳ್ಳಿಗಳಲ್ಲೂ ಯೋಗ ಶಿಬಿರ ನಡೆಯುತ್ತಿದೆ. ಇದೀಗ ಅದರ ಭಾಗವಾಗಿ “ಸಂಚಾರಿ ಯೋಗ ಆರಂಭವಾಗುತ್ತಿದೆ ಸುಳ್ಯದಲ್ಲಿ.

 

 

ಏನಿದು  ಸಂಚಾರಿ ಯೋಗ ತರಬೇತಿ:

ಯೋಗಾಭ್ಯಾಸ ಸಪ್ತ ಸಾಗರಗಳ ಸಂಗಮ. ಭಾರತೀಯ ಪರಂಪರೆಯಯ ಪ್ರತೀಕ. ಸೃಷ್ಠಿಯನ್ನು ಬಿಟ್ಟು  ಯೋಗವಿಲ್ಲ. ಯೋಗವು ತ್ಯಾಗದ ಮೂಲಾಧಾರ . ಯೋಗದ ಮೂಲಕ ಗುರಿ, ಮಾನಸಿಕ ಸ್ಥಿರತೆ, ಶಾರೀರಿಕ ಶುದ್ಧತೆ ಸಾದ್ಯವಿದೆ. ಯೋಗದ ಬೆಳಕು ಪ್ರತಿಯೊಬ್ಬರ ಹೃದಯಲ್ಲಿ ಬೆಳೆಯಬೇಕು. ಹೀಗಾಗಿ 15 ದಿನಗಳ ಯೋಗ ತರಬೇತಿ ಯೋಗ ಗುರು ಸಂತೋಷ್ ಮುಂಡಕಜೆ ನೇತೃತ್ವದಲ್ಲಿ  ತಾಲೂಕಿನ ವಿವಿಧ ಕಡೆ ನಡೆಯಲಿದೆ. ಶಿಬಿರ ಉಚಿತವಾಗಿರುತ್ತದೆ. ಶಿಬಿರಾರ್ಥಿಗಳು ಆಯಾ ಗ್ರಾಮದವರು ಇರುತ್ತಾರೆ. ಸೇವಾ ರೂಪದಲ್ಲಿ ಯೋಗ ತರಬೇತಿ ನೀಡುವ ಇವರ ಕಾಳಜಿ ಮೆಚ್ಚುಗೆಗೆ ಪಾತ್ರವಾಗುತ್ತದೆ. ಶಿಬಿರ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ 15 ದಿನಗಳ ಕಾಲ ನಿರಂತರವಾಗಿ ನಡೆಯುತ್ತದೆ. ಇದೀಗ ಮೊದಲ ಶಿಬಿರ ಉಬರಡ್ಕದಲ್ಲಿ ಆರಂಭಗೊಂಡಿದೆ. ಮೊದಲ ದಿನ  ಹಾಗೂ ಜನರಿಗೆ ಅರಿವಿನ ಕೊರತೆಯಿಂದ ಕೊಂಚ ಕಡಿಮೆ ಪ್ರತಿಕ್ರಿಯೆ ಬಂದಿದೆ , ಆದರೆ ಇದು ನಿರಂತರ ಶಿಬಿರವಾಗಿರುತ್ತದೆ. ಉತ್ಸಾಹ ಕುಂದದೆ ಈ ಸೇವೆ ಮಾಡಲು ಸಾರ್ವಜನಿಕರೂ ಸಹಕರಿಸಬೇಕು ಎಂಬುದು ಆಶಯ.

 

ಉಬರಡ್ಕದಲ್ಲಿ ನಡೆದ ಶಿಬಿರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಶ್ರೀನಿವಾಸ ಉಬರಡ್ಕ ಉದ್ಘಾಟಿಸಿದರು. ಅತಿಥಿಗಳಾಗಿ  ಉಬರಡ್ಕ ಗ್ರಾಪಂ ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಇದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

3 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

3 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

3 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

4 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

4 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

4 hours ago