Advertisement
MIRROR FOCUS

ಸುಳ್ಯದಲ್ಲಿ ಶುರುವಾಗಿದೆ “ಸಂಚಾರಿ ಯೋಗ “, ಮನೆಮನೆಗೂ ಬರಲಿದ್ದಾರೆ ಯೋಗ ಗುರುಗಳು….!

Share

ಸುಳ್ಯ: ಸುಳ್ಯದಲ್ಲಿ  ಇದೀಗ “ಸಂಚಾರಿ ಯೋಗ” ಎಂಬ ವಿಶೇಷ ಅಭಿಯಾನ ಶುರುವಾಗಿದೆ. ಪ್ರತೀ ಗ್ರಾಮ, ಹಳ್ಳಿ, ವಾರ್ಡ್ ಗಳಿಗೆ ಯೋಗ ಗುರುಗಳು ಆಗಮಿಸಿ ಯೋಗದ ಬಗ್ಗೆ ತರಬೇತಿ ನೀಡಿಲಿದ್ದಾರೆ. ಇದರ ಆರಂಭ ಉಬರಡ್ಕದಲ್ಲಿ  ನಡೆದಿದೆ. 15 ದಿನಗಳ ಕಾಲ ಇಲ್ಲಿ ಯೋಗ ಶಿಬಿರ ನಡೆಯಲಿದೆ. ಈ ಶಿಬಿರ  ಯೋಗಗುರು ಸಂತೋಷ್ ಮುಂಡಕಜೆ ನೇತೃತ್ವದಲ್ಲಿ ನಡೆಯುತ್ತಿದೆ.

ಯೋಗವೆಂಬುದು ಈಗ ಎಲ್ಲರ ಸೊತ್ತು. ಹಿಂದೆಲ್ಲಾ ಯೋಗ ಎಂದರೇನು ಎಂಬುದನ್ನು ಸಾಕಷ್ಟು ಬಾರಿ ವಿವರವಾಗಿ ಹೇಳಿದರೂ ಯೋಗದ ಬಗ್ಗೆ ಅನಾದಾರ ಇತ್ತು. ಭಾರತೀಯ ಪರಂಪರೆ ಇದಕ್ಕಿದ್ದರೂ ಯೋಗದ ಮಹತ್ವ ತಿಳಿದಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೂಲಕ ಯಾವಾಗ ಯೋಗವು ವಿಶ್ವದ ಮಟ್ಟಕ್ಕೆ ತಲಪಿತೋ ಅಂದಿನಿಂದಲೇ ಯೋಗವು ಎಲ್ಲರ ಸೊತ್ತಾಯಿತು. ಪ್ರತಿಯೊಬ್ಬರೂ ಯೋಗ ಮಾಡುವುದಕ್ಕೆ ಆರಂಭ ಮಾಡಿದರು. ಹೀಗಾಗಿ ವಿಶ್ವಯೋಗದಿನ ಮಾತ್ರವಲ್ಲ ಯೋಗ ಕೇಂದ್ರಗಳು ತೆರೆದವು, ಪ್ರತೀ ಹಳ್ಳಿಗೂ ಯೋಗದ ಬಗ್ಗೆ ಅರಿವು ಮೂಡಿತು.

 

 

ವಿಶ್ವ  ಯೋಗದ ಕಲ್ಪನೆ ಹೀಗಿತ್ತು,  ಭಾರತೀಯ ಪರಂಪರೆಯಲ್ಲಿ  ಯೋಗಕ್ಕೆ ಮಹತ್ವದ ಸ್ಥಾನವಿತ್ತು. ಋಷಿಮುನಿಗಳು ಯೋಗದ ಮೂಲಕವೇ ದೇಹವನ್ನು, ಮನಸ್ಸನ್ನು ನಿಯಂತ್ರಣ ಮಾಡುತ್ತಿದ್ದರು. ರೋಗ ಮುಕ್ತ ಬದುಕು ಸಾಗಿಸುತ್ತಿದ್ದರು. ಆದರೆ ಕಾಲಕ್ರಮೇಣ ಯೋಗ ಮರೆಯಾಯಿತು. ದೇಶದಲ್ಲಿ  ರೋಗಿಗಳ ಸಂಖ್ಯೆ ಹೆಚ್ಚಾಗತೊಡಗಿತು. ಇದಕ್ಕೆ ಆಹಾರ, ವಿಹಾರ, ಮನಸ್ಸೂ ಕಾರಣವಾಯಿತು. ಸಮೀಕ್ಷೆಯೊಂದರ ಪ್ರಕಾರ ಈ ದೇಶದಲ್ಲಿ ಶೇ.30 ರಷ್ಟು ಯುವಕರ ಸಹಿತ 50 ವರ್ಷದ ಕೆಳಗಿನ ಮಂದಿ ವಿವಿಧ ಗಂಭೀರವಲ್ಲದ  ಕಾಯಿಲೆಯಿಂದ ಬಳಲುತ್ತಿದ್ದರು. ವರ್ಷದಿಂದ ವರ್ಷಕ್ಕೆ ಇದರ ಪ್ರಮಾಣ ಹೆಚ್ಚುತ್ತಲೇ ಹೋಗುತ್ತಿದೆ. ಹೀಗಾದರೆ ದೇಶದ ಮಾನವ ಸಂಪನ್ಮೂಲದ ಸದ್ಭಳಕೆ ಕಷ್ಟವಾಗುತ್ತಿದೆ. ಇದೇ ರೀತಿಯಲ್ಲಿ ಸಾಗಿದರೆ ಮುಂದಿನ 25 ವರ್ಷಗಳಲ್ಲಿ  ಯುವಕರೇ ರೋಗದಿಂದ ಬಳಲುತ್ತಾರೆ,. ಹೀಗಾದರೆ ಮಾನವ ಸಂಪನ್ಮೂಲದ ಕೊರತೆ ಹೆಚ್ಚುತ್ತದೆ. ಹೀಗಾಗಿ ಇಂತಹ ರೋಗಗಳ ನಿವಾರಣೆ ಹಾಗೂ ಗಂಭೀರವಲ್ಲದ ಕಾಯಿಲೆಗೆ ಸೂಕ್ತ ಚಿಕಿತ್ಸೆ ಯೋಗ. ಇದರ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಯೋಗವನ್ನು ವಿಶ್ವಮಟ್ಟಕ್ಕೆ ವಿಸ್ತರಿಸಿದರು. ಇದು ಭಾರತದಲ್ಲೂ ಮತ್ತೆ ಯೋಗ ಜೀವಪಡೆಯುವುದಕ್ಕೆ ಸಾಧ್ಯವಾಯಿತು. ಹೀಗಾಗಿ ಈಗ ಭಾರತದ ಹಳ್ಳಿ ಹಳ್ಳಿಗಳಲ್ಲೂ ಯೋಗ ಶಿಬಿರ ನಡೆಯುತ್ತಿದೆ. ಇದೀಗ ಅದರ ಭಾಗವಾಗಿ “ಸಂಚಾರಿ ಯೋಗ ಆರಂಭವಾಗುತ್ತಿದೆ ಸುಳ್ಯದಲ್ಲಿ.

 

 

ಏನಿದು  ಸಂಚಾರಿ ಯೋಗ ತರಬೇತಿ:

ಯೋಗಾಭ್ಯಾಸ ಸಪ್ತ ಸಾಗರಗಳ ಸಂಗಮ. ಭಾರತೀಯ ಪರಂಪರೆಯಯ ಪ್ರತೀಕ. ಸೃಷ್ಠಿಯನ್ನು ಬಿಟ್ಟು  ಯೋಗವಿಲ್ಲ. ಯೋಗವು ತ್ಯಾಗದ ಮೂಲಾಧಾರ . ಯೋಗದ ಮೂಲಕ ಗುರಿ, ಮಾನಸಿಕ ಸ್ಥಿರತೆ, ಶಾರೀರಿಕ ಶುದ್ಧತೆ ಸಾದ್ಯವಿದೆ. ಯೋಗದ ಬೆಳಕು ಪ್ರತಿಯೊಬ್ಬರ ಹೃದಯಲ್ಲಿ ಬೆಳೆಯಬೇಕು. ಹೀಗಾಗಿ 15 ದಿನಗಳ ಯೋಗ ತರಬೇತಿ ಯೋಗ ಗುರು ಸಂತೋಷ್ ಮುಂಡಕಜೆ ನೇತೃತ್ವದಲ್ಲಿ  ತಾಲೂಕಿನ ವಿವಿಧ ಕಡೆ ನಡೆಯಲಿದೆ. ಶಿಬಿರ ಉಚಿತವಾಗಿರುತ್ತದೆ. ಶಿಬಿರಾರ್ಥಿಗಳು ಆಯಾ ಗ್ರಾಮದವರು ಇರುತ್ತಾರೆ. ಸೇವಾ ರೂಪದಲ್ಲಿ ಯೋಗ ತರಬೇತಿ ನೀಡುವ ಇವರ ಕಾಳಜಿ ಮೆಚ್ಚುಗೆಗೆ ಪಾತ್ರವಾಗುತ್ತದೆ. ಶಿಬಿರ ಬೆಳಗ್ಗೆ 6 ರಿಂದ 7 ಗಂಟೆಯವರೆಗೆ 15 ದಿನಗಳ ಕಾಲ ನಿರಂತರವಾಗಿ ನಡೆಯುತ್ತದೆ. ಇದೀಗ ಮೊದಲ ಶಿಬಿರ ಉಬರಡ್ಕದಲ್ಲಿ ಆರಂಭಗೊಂಡಿದೆ. ಮೊದಲ ದಿನ  ಹಾಗೂ ಜನರಿಗೆ ಅರಿವಿನ ಕೊರತೆಯಿಂದ ಕೊಂಚ ಕಡಿಮೆ ಪ್ರತಿಕ್ರಿಯೆ ಬಂದಿದೆ , ಆದರೆ ಇದು ನಿರಂತರ ಶಿಬಿರವಾಗಿರುತ್ತದೆ. ಉತ್ಸಾಹ ಕುಂದದೆ ಈ ಸೇವೆ ಮಾಡಲು ಸಾರ್ವಜನಿಕರೂ ಸಹಕರಿಸಬೇಕು ಎಂಬುದು ಆಶಯ.

 

ಉಬರಡ್ಕದಲ್ಲಿ ನಡೆದ ಶಿಬಿರವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಶ್ರೀನಿವಾಸ ಉಬರಡ್ಕ ಉದ್ಘಾಟಿಸಿದರು. ಅತಿಥಿಗಳಾಗಿ  ಉಬರಡ್ಕ ಗ್ರಾಪಂ ಮಾಜಿ ಅಧ್ಯಕ್ಷ ಹರೀಶ್ ರೈ ಉಬರಡ್ಕ ಇದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

6 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

7 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago