ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಯಿತು. ವಿಘ್ನ ವಿನಾಶಕ ಗಣೇಶ ಆರಾಧನೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುವ 51ನೇ ವರ್ಷದ ಗಣೇಶೋತ್ಸವ ಆರಂಭಗೊಂಡಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವ ಸೆ.6 ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಳ್ಳಲಿದೆ.
ಹಳೆಗೇಟು:
ಹಳೆಗೇಟಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭಗೊಂಡಿದೆ. ಧಾರ್ಮಿಕ ಸಭೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವ ಶೋಭಾ ಯಾತ್ರೆಯೊಂದಿಗೆ ಸೆ.4ರಂದು ಸಮಾಪನಗೊಳ್ಳಲಿದೆ.
ಜಟ್ಟಿಪಳ್ಳ:
ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಮಿತಿಯ ವತಿಯಿಂದ ನಡೆದ 26ನೇ ವರ್ಷದ ಗಣೇಶೋತ್ಸವ ನಡೆಯಿತು. ಸೋಮವಾರ ಬೆಳಿಗ್ಗೆ ದೇವರ ಮೂರ್ತಿ ಪ್ರತಿಷ್ಠೆ ನಡೆಯಿತು. ಬಳಿಕ ವಿವಿಧ ಕಾರ್ಯಕ್ರಮಗಳು, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…