ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವವನ್ನು ಆಚರಿಸಲಾಯಿತು. ವಿಘ್ನ ವಿನಾಶಕ ಗಣೇಶ ಆರಾಧನೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ ಹಾಗು ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯುವ 51ನೇ ವರ್ಷದ ಗಣೇಶೋತ್ಸವ ಆರಂಭಗೊಂಡಿದೆ. ವಿವಿಧ ಕಾರ್ಯಕ್ರಮಗಳೊಂದಿಗೆ ಐದು ದಿನಗಳ ಕಾಲ ನಡೆಯುವ ಗಣೇಶೋತ್ಸವ ಸೆ.6 ರಂದು ವೈಭವದ ಶೋಭಾಯಾತ್ರೆಯೊಂದಿಗೆ ಸಮಾಪನಗೊಳ್ಳಲಿದೆ.
ಹಳೆಗೇಟು:
ಹಳೆಗೇಟಿನ ಸಾಂಸ್ಕೃತಿಕ ಸಂಘದ ವತಿಯಿಂದ ನಡೆಯುವ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆರಂಭಗೊಂಡಿದೆ. ಧಾರ್ಮಿಕ ಸಭೆ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವ ಶೋಭಾ ಯಾತ್ರೆಯೊಂದಿಗೆ ಸೆ.4ರಂದು ಸಮಾಪನಗೊಳ್ಳಲಿದೆ.
ಜಟ್ಟಿಪಳ್ಳ:
ಜಟ್ಟಿಪಳ್ಳದ ಶ್ರೀರಾಮ ಭಜನಾ ಸೇವಾ ಸಮಿತಿಯ ವತಿಯಿಂದ ನಡೆದ 26ನೇ ವರ್ಷದ ಗಣೇಶೋತ್ಸವ ನಡೆಯಿತು. ಸೋಮವಾರ ಬೆಳಿಗ್ಗೆ ದೇವರ ಮೂರ್ತಿ ಪ್ರತಿಷ್ಠೆ ನಡೆಯಿತು. ಬಳಿಕ ವಿವಿಧ ಕಾರ್ಯಕ್ರಮಗಳು, ಮಹಾ ಪೂಜೆ, ಅನ್ನಸಂತರ್ಪಣೆ ನಡೆಯಿತು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…