ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯ ಸಂದೇಶ ನೀಡಿದ ಅವರು ಭವ್ಯ ಭಾರತದ ಪರಿಕಲ್ಪನೆಯ ಯೋಜನೆಗಳಡಿಯಲ್ಲಿ ಯುವ ಸಮುದಾಯವು ತೊಡಗಿಸಿಕೊಂಡು ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ ಎಂದು ಕರೆ ನೀಡಿದರು. ಪ್ರಾಚೀನ ಕಾಲದ ಗತ ವೈಭವವನ್ನು ನಮ್ಮ ದೇಶವು ಮತ್ತೆ ಪಡೆಯುವಂತಾಗಬೇಕು. ಅತಿಯಾದ ಆಧುನಿಕ ತಂತ್ರಜ್ಞಾನದ ಆವಿಷ್ಕಾರದ ಭರದಲ್ಲಿ ಜಗತ್ತೇ ಮೆಚ್ಚುವ ನಮ್ಮ ಆಚಾರ-ವಿಚಾರ, ಸಂಸ್ಕೃತಿ, ನಡೆ ನುಡಿ ಒಗ್ಗಟ್ಟು ರಾಷ್ಟ್ರೀಯ ಭಾವೈಕ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಆಚರಣೆಗಳು ನಮ್ಮ ಭಾವೈಕ್ಯತೆಯನ್ನು ಬೆಸೆಯಲಿ, ನಮ್ಮ ಮನಸ್ಸನ್ನು ಪತಿವರ್ತಿಸಲಿ ನವ್ಯ ಸಾಧನೆಗೆ ಸ್ಪೂರ್ತಿಯ ಚಿಲುಮೆಯಾಗಲಿ ಆ ಮೂಲಕ ಭವ್ಯ ಭಾರತ ನಿರ್ಮಾಣವಾಗಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…