ಸುಳ್ಯ: ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿಯ ಆಶ್ರಯದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಸ್ವಾತಂತ್ರ್ಯ ಸಂದೇಶ ನೀಡಿದ ಅವರು ಭವ್ಯ ಭಾರತದ ಪರಿಕಲ್ಪನೆಯ ಯೋಜನೆಗಳಡಿಯಲ್ಲಿ ಯುವ ಸಮುದಾಯವು ತೊಡಗಿಸಿಕೊಂಡು ದೇಶದ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಾಗಿದೆ ಎಂದು ಕರೆ ನೀಡಿದರು. ಪ್ರಾಚೀನ ಕಾಲದ ಗತ ವೈಭವವನ್ನು ನಮ್ಮ ದೇಶವು ಮತ್ತೆ ಪಡೆಯುವಂತಾಗಬೇಕು. ಅತಿಯಾದ ಆಧುನಿಕ ತಂತ್ರಜ್ಞಾನದ ಆವಿಷ್ಕಾರದ ಭರದಲ್ಲಿ ಜಗತ್ತೇ ಮೆಚ್ಚುವ ನಮ್ಮ ಆಚಾರ-ವಿಚಾರ, ಸಂಸ್ಕೃತಿ, ನಡೆ ನುಡಿ ಒಗ್ಗಟ್ಟು ರಾಷ್ಟ್ರೀಯ ಭಾವೈಕ್ಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಆಚರಣೆಗಳು ನಮ್ಮ ಭಾವೈಕ್ಯತೆಯನ್ನು ಬೆಸೆಯಲಿ, ನಮ್ಮ ಮನಸ್ಸನ್ನು ಪತಿವರ್ತಿಸಲಿ ನವ್ಯ ಸಾಧನೆಗೆ ಸ್ಪೂರ್ತಿಯ ಚಿಲುಮೆಯಾಗಲಿ ಆ ಮೂಲಕ ಭವ್ಯ ಭಾರತ ನಿರ್ಮಾಣವಾಗಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಗೃಹ ರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…