Advertisement
ಸುದ್ದಿಗಳು

ಸುಳ್ಯದಲ್ಲಿ 94ಸಿ ಯಲ್ಲಿ 4703 ಅರ್ಜಿಗಳು ತಿರಸ್ಕೃತ : ಮರು ಪರಿಶೀಲನೆಗೆ ಸೂಚನೆ

Share

ಸುಳ್ಯ: ಸುಳ್ಯ ತಾಲೂಕಿನಲ್ಲಿ 94ಸಿ ಯೋಜನೆಯಡಿಯಲ್ಲಿ 4703 ಅರ್ಜಿಗಳು ತಿರಸ್ಕೃತಗೊಂಡಿದ್ದು ಇದರ ಮರು ಪರಿಶೀಲನೆ ನಡೆಸಬೇಕು ಎಂದು  ರಾಜ್ಯ ವಿಧಾನ ಪರಿಷತ್ ಸದಸ್ಯ ಹಾಗೂ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಸೂಚನೆ ನೀಡಿದ್ದಾರೆ.

ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಸುಳ್ಯದಲ್ಲಿ ಒಟ್ಟು 5082 ಅರ್ಜಿಗಳಿಗೆ 94 ಸಿ ಮಂಜೂರಾಗಿದೆ. 4703 ಅರ್ಜಿಗಳು ಯಾಕೆ ತಿರಸ್ಕೃ ತಗೊಂಡಿದೆ ಎಂದು ಐವನ್ ಡಿಸೋಜ ಪ್ರಶ್ನಿಸಿದರು.  ಪ್ರತಿ ಗ್ರಾಮ ಮಟ್ಟದಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಮರು ಪರಿಶೀಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸಹಾಯಕ ಕಮೀಷನರ್ ಮತ್ತು ತಹಶೀಲ್ದಾರ್ ಅವರಿಗೆ ಸೂಚಿಸಿದರು.

ಕಂದಾಯ ಅದಾಲತ್ ಮತ್ತು ಪಿಂಚಣಿ ಅದಾಲತ್‍ಗಳನ್ನು ಸಮರ್ಪಕವಾಗಿ ಮಾಡಲು ಸೂಚನೆ ನೀಡಿದರು. ಮುಂದಿನ ಕಂದಾಯ ಅದಾಲತ್‍ಗೆ ಖುದ್ದಾಗಿ ಭಾಗವಹಿಸಿ ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುವುದಾಗಿ ಅವರು ಹೇಳಿದರು. ಸರ್ವೆ ಇಲಾಖೆಯಲ್ಲಿ ಅರ್ಜಿಗಳು ಕಡಿಮೆ ವಿಲೇವಾರಿ ಆಗಿರುವುದಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸರ್ವೆ ಇಲಾಖೆಯ ಬಗ್ಗೆ ತುಂಬಾ ದೂರುಗಳಿವೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ಸಹಾಯಕ ಕಮೀಷನರ್ ಅವರಿಗೆ ಸೂಚಿಸಿದರು. ಸರ್ವೆ ಇಲಾಖೆಯಲ್ಲಿ ಹೆಚ್ಚು ಸರ್ವೆಯರ್ ಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು. ನಗರ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಮಟ್ಟದಲ್ಲಿ ನಿವೇಶನಕ್ಕೆ ಮತ್ತು ಘನ ತ್ಯಾಜ್ಯ ವಿಲೇವಾರಿಗೆ ಸ್ಥಳ ಕಾದಿರಿಸುವಂತೆ ಸೂಚಿಸಿದರು. ಅಕ್ರಮ ಸಕ್ರಮ ಸಮಿತಿಗೆ ಹೋಬಳಿ ಮಟ್ಟದಲ್ಲಿ ಸಮಿತಿ ರಚಿಸುವ ಬಗ್ಗೆ ಸರಕಾರ ಯೋಚನೆ ನಡೆಸುತಿದೆ ಎಂದು ಅವರು ಹೇಳಿದರು.

ಶಾಸಕ ಎಸ್.ಅಂಗಾರ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸದಸ್ಯರಾದ ಅಶೋಕ್ ನೆಕ್ರಾಜೆ, ಅಬ್ದುಲ್ ಗಫೂರ್, ತೀರ್ಥರಾಮ ಜಾಲ್ಸೂರು, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಪ್ರಮುಖರಾದ ಎಸ್.ಸಂಶುದ್ದೀನ್, ಕಾವು ಹೇಮನಾಥ ಶೆಟ್ಟಿ, ಪಿ.ಎಸ್.ಗಂಗಾಧರ, ಭಾಗೀರಥಿ ಮುರುಳ್ಯ, ಬೆಟ್ಟ ರಾಜಾರಾಂ ಭಟ್, ರಾಧಾಕೃಷ್ಣ ಪರಿವಾರಕಾನ, ಕೆ.ಎಂ.ಮುಸ್ತಫಾ, ಮಹಮ್ಮದ್ ಕುಂಞ ಗೂನಡ್ಕ, ಸಿದ್ದಿಕ್, ಶಾಫಿ ಕುತ್ತಮೊಟ್ಟೆ, ಆರ್.ಕೆ.ಮಹಮ್ಮದ್, ಧರ್ಮಪಾಲ ಕೊಯಿಂಗಾಜೆ, ಲಕ್ಷ್ಮಣ ಶೆಣೈ, ಕೆ.ಕೆ.ಹರಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago