Advertisement
MIRROR FOCUS

ಸುಳ್ಯದಾದ್ಯಂತ ದಿನಸಿ ಸಾಮಾಗ್ರಿ ಲಭ್ಯ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ | ಗುತ್ತಿಗಾರಿನಲ್ಲಿ ಮಾದರಿ ವ್ಯವಸ್ಥೆ |

Share

ಸುಳ್ಯ : ಕೊರೊನಾ ವೈರಸ್ ಹರಡುವುದು  ತಡೆಯುಲು ಸರಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡು ಇದೀಗ ಲಾಕ್ ಡೌನ್ ಗೆ ಸೂಚನೆ ನೀಡಿದೆ. ಇದರ ಪ್ರಮುಖ ಉದ್ದೇಶ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು  ಹಾಗೂ ವೈರಸ್ ಹರಡುವುದು  ತಡೆಯುವುದು.

ಲಾಕ್ ಡೌನ್ ಸಂದರ್ಭ ದಿನಸಿ ಸಾಮಾಗ್ರಿ ಈಗ ಲಭ್ಯವಿದೆ. ದಿನಸಿ ಅಂಗಡಿಗಳು ಮಧ್ಯಾಹ್ನ 12 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂದರ್ಭ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲೆಡೆ ವ್ಯವಸ್ಥೆ ಮಾಡಲಾಗಿದೆ. ಇಲ್ಲದೇ ಇದ್ದರೆ ಅಂಗಡಿ ಮಾಲೀಕರೇ ಇದಕ್ಕೆ ವ್ಯವಸ್ಥೆ ಮಾಡಬೇಕಿದೆ. ವೈರಸ್ ಹರಡುವುದು  ತಡೆಯುವುದರಲ್ಲಿ  ಈಗ ಅಂಗಡಿ ಮಾಲೀಕರ ಪಾತ್ರವೂ ಬಹುಮುಖ್ಯವಾಗಿದೆ. ಇದಕ್ಕಾಗಿ ಮಾರ್ಕ್ ಮಾಡಿ ಆ ಮೂಲಕವೇ ಸಾಮಾಗ್ರಿಗೆ ಬರುವಂತೆ ಸುಳ್ಯದಾದ್ಯಂತ ಗ್ರಾಮೀಣ ಭಾಗದವರೆಗೆ ವ್ಯವಸ್ಥೆ ಮಾಡಬೇಕಿದೆ.

ಸುಳ್ಯ ತಾಲೂಕಿನಾದ್ಯಂತ ಗುರುವಾರ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಅಂಗಡಿ , ಬ್ಯಾಂಕ್, ಹಾಲು, ತರಕಾರಿ ಲಭ್ಯವಾಗಿದೆ. ಆ ಬಳಿಕ ಬಂದ್ ಮಾಡಲಾಗಿದೆ. ನಾಳೆಯೂ ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿರುತ್ತದೆ. ಎಲ್ಲೇ ಆಗಲಿ ಸಾಮಾಜಿಕ ಅಂತರ ಕಾಪಾಡಬೇಕಿದೆ. ಆದರೆ ಅನಗತ್ಯವಾಗಿ ಪೇಟೆಗೆ, ಮನೆಯಿಂದ ಹೊರಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

 ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ:

ಐವರ್ನಾಡು ಸಹಕಾರಿ ಸಂಘದ ಪ್ರದೇಶದಲ್ಲಿ ದಿನಸಿ ಅಂಗಡಿ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕ್ ಮಾಡಲಾಗಿತ್ತು. ಈ ಮೂಲಕ  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು.

ಗುತ್ತಿಗಾರಿನಲ್ಲಿ  ಮಾದರಿ ವ್ಯವಸ್ಥೆ:

ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಬರದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಸಂದರ್ಭ ಅಗತ್ಯ ಸೇವೆಗಾಗಿ ತುರ್ತು ಕಾರ್ಯಪಡೆ ರಚನೆ ಮಾಡಲಾಗಿದೆ. ಇದರ ಕಾರ್ಯಕರ್ತರು ಅಗತ್ಯ ಸಂದರ್ಭ ನೆರವಿಗೆ ಬರುತ್ತಾರೆ. ಈಗಾಗಲೇ ಹೊರಜಿಲ್ಲೆಗಳಿಂದ, ಹೊರ ದೇಶಗಳಿಂದ ಗುತ್ತಿಗಾರು ಗ್ರಾಮಕ್ಕೆ ಆಗಮಿಸಿದವರ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿ 14 ದಿನಗಳ ಕಾಲ ಮನೆಯಿಂದ ಹೊರಬರಂದತೆ ಸೂಚನೆ ನೀಡಲಾಗಿದೆ.

 

ಪಂಚಾಯತ್ ಅಧ್ಯಕ್ಷ ಅಚ್ಚುತ ಗುತ್ತಿಗಾರು , ಪಿಡಿಒ ಶ್ಯಾಮ ಪ್ರಸಾದ್ , ಗ್ರಾಪಂ ಸದಸ್ಯ ರಾಕೇಶ್ ಮೆಟ್ಟಿನಡ್ಕ, ವಿಜಯಕುಮಾರ್ ಚಾರ್ಮತ,  ಕಾರ್ಯಕರ್ತರಾದ ಲೋಕೇಶ್ವರ ಡಿ ಆರ್ , ವಿನಯ ಮೆಟ್ಟಿನಡ್ಕ, ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಹೊರಜಿಲ್ಲೆಗಳಿಂದ ಬಂದವರ  ಮನೆಗಳಿಗೆ  ಭೇಟಿ ನೀಡಿ ಜಾಗೃತಿ ಮೂಡಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

3 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

3 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

17 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago