Advertisement
ನಿಧನ‌ ಸುದ್ದಿಗಳು

ಸುಳ್ಯದ ಅನ್ನದಾತ ಸುಂದರ ಸರಳಾಯ ಇನ್ನಿಲ್ಲ

Share

ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.

Advertisement
Advertisement
Advertisement
Advertisement
Advertisement

ಸುಳ್ಯದ ಇವರ `ರಾಮ್‍ಪ್ರಸಾದ್’ ಹೋಟೆಲ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್‍ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್‍ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್‍ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್‍ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Advertisement

ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು  ಅಂತಿಮ ದರ್ಶನ ಪಡೆದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

58 mins ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

3 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago