Advertisement
ನಿಧನ‌ ಸುದ್ದಿಗಳು

ಸುಳ್ಯದ ಅನ್ನದಾತ ಸುಂದರ ಸರಳಾಯ ಇನ್ನಿಲ್ಲ

Share

ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯದ ಇವರ `ರಾಮ್‍ಪ್ರಸಾದ್’ ಹೋಟೆಲ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್‍ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್‍ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್‍ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್‍ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು  ಅಂತಿಮ ದರ್ಶನ ಪಡೆದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

16 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

20 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

24 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago