ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.
ಸುಳ್ಯದ ಇವರ `ರಾಮ್ಪ್ರಸಾದ್’ ಹೋಟೆಲ್ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…