Advertisement
ನಿಧನ‌ ಸುದ್ದಿಗಳು

ಸುಳ್ಯದ ಅನ್ನದಾತ ಸುಂದರ ಸರಳಾಯ ಇನ್ನಿಲ್ಲ

Share

ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯದ ಇವರ `ರಾಮ್‍ಪ್ರಸಾದ್’ ಹೋಟೆಲ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್‍ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್‍ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್‍ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್‍ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Advertisement

ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು  ಅಂತಿಮ ದರ್ಶನ ಪಡೆದರು.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago