Advertisement
ನಿಧನ‌ ಸುದ್ದಿಗಳು

ಸುಳ್ಯದ ಅನ್ನದಾತ ಸುಂದರ ಸರಳಾಯ ಇನ್ನಿಲ್ಲ

Share

ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯದ ಇವರ `ರಾಮ್‍ಪ್ರಸಾದ್’ ಹೋಟೆಲ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್‍ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್‍ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್‍ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್‍ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು  ಅಂತಿಮ ದರ್ಶನ ಪಡೆದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

26 minutes ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

9 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

11 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

12 hours ago