Advertisement
ನಿಧನ‌ ಸುದ್ದಿಗಳು

ಸುಳ್ಯದ ಅನ್ನದಾತ ಸುಂದರ ಸರಳಾಯ ಇನ್ನಿಲ್ಲ

Share

ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.

ಸುಳ್ಯದ ಇವರ `ರಾಮ್‍ಪ್ರಸಾದ್’ ಹೋಟೆಲ್‍ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್‍ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್‍ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್‍ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್‍ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು  ಅಂತಿಮ ದರ್ಶನ ಪಡೆದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

6 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

8 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

14 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

15 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

22 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago