ಸುಳ್ಯ: ಸುಳ್ಯದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಸುಂದರ ಸರಳಾಯ (81) ಶನಿವಾರ ನಿಧನರಾದರು. ವಯೋಸಹಜ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದ ಅವರು ಸುಳ್ಯದ ಖಾಸಗೀ ಆಸ್ಪತ್ರೆಯಲ್ಲಿ ನಿಧನರಾದರು.
ಸುಳ್ಯದ ಇವರ `ರಾಮ್ಪ್ರಸಾದ್’ ಹೋಟೆಲ್ನಲ್ಲಿ ಅತ್ಯಂತ ಕಡಿಮೆ ದರದಲ್ಲಿ ಊಟ ನೀಡುವ ಮೂಲಕ ಸುಂದರ ಸರಳಾಯರು ಸುಳ್ಯದ ಅನ್ನದಾತರು ಎಂದೇ ಪ್ರಸಿದ್ಧರಾಗಿದ್ದರು. ಐದು ದಶಕಗಳಿಂದಲೂ ಹೆಚ್ಚು ಸಮಯ ಹೋಟೆಲ್ ಉದ್ಯಮ ನಡೆಸುತ್ತಿರುವ ಇವರು ತನ್ನ ಹೋಟೆಲ್ನಲ್ಲಿ ಈಗಲೂ 10 ರೂಗೆ ಸ್ವಾದಿಷ್ಟವಾದ ಊಟ ಬಡಿಸುತ್ತಿದ್ದರು. ಇಂದಿರಾ ಕ್ಯಾಂಟೀನ್, ಅಮ್ಮಾ ಕ್ಯಾಂಟೀನ್ಗಳ ಕಲ್ಪನೆ ಹುಟ್ಟುವುದಕ್ಕಿಂದ ಹಲವು ದಶಕಗಳ ಮೊದಲೇ ಸರಳಾಯರು ಸುಳ್ಯದಲ್ಲಿ ಅತೀ ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಾ ಬಂದಿದ್ದರು. ಕಳೆದ ಐದು ದಶಕಗಳಿಂದಲೂ 1 ರೂ, 2ರೂ, 3ರೂ, 4ರೂ ಬಳಿಕ 5 ರೂಗೆ ಊಟ ಬಡಿಸುತ್ತಿದ್ದ ಇವರ ಹೋಟೆಲ್ನಲ್ಲಿ ಊಟದ ದರ 10 ರೂಗಿಂತ ಮೇಲೆ ಏರಲೇ ಇಲ್ಲ. ಉಳಿದ ಹೋಟೆಲ್ಗಳಲ್ಲಿ ಊಟಕ್ಕೆ 40 ರೂ ದರ ಇರುವಾಗ ಇವರು ನೂರಾರು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ 10 ರೂಗೆ ಹೊಟ್ಟೆ ತುಂಬಾ ಊಟ ನೀಡಿ ಅನ್ನದಾತರು ಎನಿಸಿಕೊಂಡಿದ್ದರು. ತನ್ನ ಅನ್ನ ಸೇವೆಯಿಂದ ಹಲವಾರು ಸನ್ಮಾನ, ಪುರಸ್ಕಾರಗಳಿಗೆ ಭಾಜನರಾಗಿದ್ದರು. ಇವರು ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಶಾಸಕ ಎಸ್.ಅಂಗಾರ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…