ಸುಳ್ಯದ ಅಸಮಾಧಾನ ಶಮನ ? ಎಸ್.ಅಂಗಾರ ಅವರಿಗೆ ಸದ್ಯದಲ್ಲೇ ಪ್ರಮುಖ ಹುದ್ದೆ ?

August 21, 2019
12:53 PM

ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ    ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ  ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror