Advertisement
ಸುದ್ದಿಗಳು

ಸುಳ್ಯದ ಅಸಮಾಧಾನ ಶಮನ ? ಎಸ್.ಅಂಗಾರ ಅವರಿಗೆ ಸದ್ಯದಲ್ಲೇ ಪ್ರಮುಖ ಹುದ್ದೆ ?

Share

ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ    ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ  ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

8 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

15 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

15 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago