Advertisement
ಸುದ್ದಿಗಳು

ಸುಳ್ಯದ ಅಸಮಾಧಾನ ಶಮನ ? ಎಸ್.ಅಂಗಾರ ಅವರಿಗೆ ಸದ್ಯದಲ್ಲೇ ಪ್ರಮುಖ ಹುದ್ದೆ ?

Share

ಸುಳ್ಯ: ಶಾಸಕ ಎಸ್ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದ ಸುಳ್ಯ ಬಿಜೆಪಿ ಈಗ ಶಾಂತವಾಗಿದೆಯೇ ? ಎಸ್ ಅಂಗಾರ ಅವರಿಗೆ    ಮುಂದಿನ ಸಚಿವ ಹಂತದ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಅಥವಾ  ಪ್ರಮುಖವಾದ ನಿಗಮದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದು ಈ ಮೂಲಕ ಸುಳ್ಯ ಬಿಜೆಪಿ ಪ್ರಮುಖರನ್ನು ಸಮಾಧಾನ ಪಡಿಸಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ನಂಟು ಹೊಂದಿರುವ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರು ಘೋಷಣೆಯಾದ ಬೆನ್ನಲ್ಲೇ ಅವರದೇ ತವರು ಕ್ಷೇತ್ರದ ಅಸಮಾಧಾನ ಶಮನ ಮಾಡಲು ತಕ್ಷಣವೇ ಮಾತುಕತೆ ನಡೆಸಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಮುಂದಿನ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಅಥವಾ ಪ್ರಮುಖ ನಿಮಗದ ಹುದ್ದೆ ನೀಡುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಇದರ ಜೊತೆಗೆ ಅಸಮಾಧಾನದ ಬಗ್ಗೆ ಯಾವುದೇ ಹೇಳಿಕೆಗಳನ್ನು ಮಾಧ್ಯಮಗಳ ಮೂಲಕ ನೀಡಬಾರದು ಎಂದೂ ಸ್ಪಷ್ಟವಾದ ಸೂಚನೆ ನೀಡಿದ್ದು , ಪಕ್ಷದ ಒಳಗಿನ ಆಂತರಿಕ ಸಂಗತಿಗಳನ್ನು , ಅನಗತ್ಯವಾಗಿ ಅಭಿಪ್ರಾಯಗಳನ್ನು ಮಾಧ್ಯಮಗಳ ಮೂಲಕ ಹಂಚಿ ಗೊಂದಲ ಸೃಷ್ಟಿಸಿದರೆ ಯಾವುದೇ ಹುದ್ದೆ ಸಿಗುವುದೂ ಕಷ್ಟವಾಗಬಹುದು ಎಂಬ ಖಡಕ್ ಸೂಚನೆ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

7 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

16 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

20 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago